Homeಕರ್ನಾಟಕನಂದಿನಿ ವರ್ಸಸ್ ಅಮುಲ್ ಪ್ರಶ್ನೆ ಮಾರುಕಟ್ಟೆ ಆಕ್ರಮಣವಲ್ಲ; ಇದು ವಿಲೀನದ ಆಕ್ರಮಣ

ನಂದಿನಿ ವರ್ಸಸ್ ಅಮುಲ್ ಪ್ರಶ್ನೆ ಮಾರುಕಟ್ಟೆ ಆಕ್ರಮಣವಲ್ಲ; ಇದು ವಿಲೀನದ ಆಕ್ರಮಣ

- Advertisement -
- Advertisement -

ಇಂದು ನಮ್ಮ ದೇಶ ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಬದುಕುತ್ತಿದೆ. ಅಮುಲ್ ಉತ್ಪನ್ನಗಳು (ಐಸ್‌ಕ್ರೀಮ್, ಚೀಸ್, ಬೆಣ್ಣೆ, ತುಪ್ಪ, ಪನ್ನೀರ್, ಪಿಜ್ಜಾ, ಚೀಸ್ ಪಿಜ್ಜಾ, ಚಾಕಲೇಟ್, ಭಾರತೀಯ ಸಿಹಿ ಪದಾರ್ಥಗಳು ಇತ್ಯಾದಿ) ಕರ್ನಾಟಕದಲ್ಲಿ ಬಹಳ ಹಿಂದಿನಿಂದ ಮಾರಾಟವಾಗುತ್ತಿವೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ, ದೊಡ್ಡ ನಗರಗಳಾದ ಮೈಸೂರು-ಬೆಂಗಳೂರು-ಮಂಗಳೂರುಗಳಲ್ಲಿ ಅಮುಲ್ ಉತ್ಪನ್ನಗಳು ಮಾರಾಟವಾಗುತ್ತಿವೆ. ಇದೀಗ ಬೆಂಗಳೂರಿನಲ್ಲಿ ಹಾಲು-ಮೊಸರು ಮಾರಾಟವನ್ನು ಆರಂಭಿಸುವುದರ ಬಗ್ಗೆ ಅಮುಲ್ ಸಾರ್ವಜನಿಕ ಹೇಳಿಕೆ ನೀಡಿದೆ. ಕರ್ನಾಟಕದಲ್ಲಿ ಅಮುಲ್‌ನ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ಅಭ್ಯಂತರಕ್ಕೆ ಕಾರಣವಿಲ್ಲ. ಈ ವಿವಾದದಲ್ಲಿನ ಮೂಲದಲ್ಲಿರುವ ’ನಂದಿನಿ-ಅಮುಲ್’ ವಿಲೀನದ ಪ್ರಶ್ನೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಮಾರುಕಟ್ಟೆ ಪ್ರವೇಶ ಮತ್ತು ವಿಲೀನಗಳ ನಡುವೆ ನಾವು ಗೊಂದಲ ಮಾಡಿಕೊಳ್ಳಬಾರದು. ಈಗ ನಂದಿನಿ ರಕ್ಷಣೆಯ ಬಗ್ಗೆ ಮತ್ತು ಅಮುಲ್ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವುದು ಅದರ ಮಾರುಕಟ್ಟೆ ಪ್ರವೇಶದ ಬಗ್ಗೆಯಲ್ಲ. ಆದರೆ ಕರ್ನಾಟಕದ ಆಳುವ ಪಕ್ಷವು ಅಮಿತ್ ಷಾ ಹಮ್ಮಿಕೊಂಡಿರುವ ವಿಲೀನದ ಪ್ರಶ್ನೆಯನ್ನು ಮರೆಮಾಡಿ ಅಮುಲ್ ಮಾರುಕಟ್ಟೆ ಪ್ರವೇಶದ ಬಗ್ಗೆ ಮಾತ್ರ ಮಾತನಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಯಾಗಿ ವಿಲೀನದ ಪ್ರಶ್ನೆಯನ್ನು ಮುಂಚೂಣಿಗೆ ತಂದಿದ್ದಾರೆ. ಅಮಿತ್ ಷಾ ಅವರು ಒಕ್ಕೂಟ ಸರ್ಕಾರದ ಸಹಕಾರ ಮಂತ್ರಿ. ಇವರು ಯಾವುದೇ ಪೂರ್ವ ಸಿದ್ಧತೆಯಿಲ್ಲದೆ, ವಿನಾಕಾರಣವಾಗಿ-ಉದ್ದೇಶರಹಿತವಾಗಿ ಅಮುಲ್-ನಂದಿನಿ ವಿಲೀನದ ಯೋಜನೆಯನ್ನು ಮುಂದಿಡುವವರಲ್ಲ. ಇಲ್ಲಿರುವ ಅಪಾಯವನ್ನು ನಾವು ಗುರುತಿಸಬೇಕು.

ಅಮುಲ್-ನಂದಿನಿ ಪೈಪೋಟಿ

ಇದು ಕೇವಲ ಮಾರುಕಟ್ಟೆ ಪ್ರವೇಶದ ಬಗ್ಗೆಯಾಗಿದ್ದರೆ ನಾವು ಭಯ ಪಡಬೇಕಾಗಿರಲಿಲ್ಲ. ಏಕೆಂದರೆ ಮಾರುಕಟ್ಟೆ ಪೈಪೋಟಿಯಲ್ಲಿ ನಂದಿನಿಯು ಅಮುಲ್‌ಗಿಂತ ಉತ್ತಮ ಸ್ಥಾನದಲ್ಲಿದೆ. ಅಮುಲ್ ಹಾಲು ಲೀಟರ್‌ಗೆ ರೂ. 65; ನಂದಿನಿ ಹಾಲು ರೂ. 49. ಅಮುಲ್ ಮೊಸರು ಲೀಟರ್‌ಗೆ ರೂ. 67; ನಂದಿನಿ ಮೊಸರು ರೂ. 47. ಕೆನೆಭರಿತ ಹಾಲಿನ ಬೆಲೆ ಅಮುಲ್ ರೂ. 64. ನಂದಿನಿಯದ್ದು 900 ಮಿಲಿಲೀಟರ್‌ಗೆ ರೂ. 50. ಅಮುಲ್ ದೇಶದಲ್ಲಿ ಪ್ರಥಮ ಸ್ಥಾನದಲ್ಲಿರುವ ಹಾಲು ಸಹಕಾರ ಸಂಸ್ಥೆಯಾದರೆ ನಂದಿನಿ ದೇಶದಲ್ಲಿ ಎರಡನೆಯ ಸ್ಥಾನದಲ್ಲಿದೆ. ಅಮುಲ್ ಹೇಗೆ ಗುಜರಾತಿನ ಹೊರಗೆ ತನ್ನ ವ್ಯವಹಾರವನ್ನು ಬೆಳೆಸುತ್ತಿದೆಯೋ ಅದೇ ರೀತಿಯಲ್ಲಿ ನಂದಿನಿಯು ತನ್ನ ವ್ಯಾಪಾರವನ್ನು ರಾಜ್ಯದ ಹೊರಗೆ ಬೆಳೆಸುತ್ತಿದೆ. ಉದಾ: ಪ್ರತಿ ದಿನ ನಂದಿನಿ 2.5 ಲಕ್ಷ ಲೀಟರ್ ಹಾಲನ್ನು ಮುಂಬೈಗೆ ರವಾನಿಸುತ್ತಿದೆ. ಹೈದರಾಬಾದಿಗೆ ದಿನನಿತ್ಯ 1.5 ಲಕ್ಷ ಲೀಟರ್ ಹಾಲನ್ನು ರವಾನಿಸುತ್ತಿದೆ. ತಮಿಳುನಾಡಿನಲ್ಲಿಯೂ ಮಾರಾಟ ಮಾಡುತ್ತಿದೆ.

ಅಮಿತ್ ಷಾ ಸೃಷ್ಟಿಸಿದ ವಿವಾದ!

ಕಳೆದ ಕೆಲವು ತಿಂಗಳುಗಳ ಹಿಂದೆ ಒಕ್ಕೂಟ ಸರ್ಕಾರದ ಗೃಹ-ಸಹಕಾರ ಮಂತ್ರಿ ಅಮಿತ್ ಷಾ ಅವರು ಮಂಡ್ಯದಲ್ಲಿ ಮಾತನಾಡುತ್ತಾ ’ನಂದಿನಿ-ಅಮುಲ್ ಸಹಕಾರಿ ಸಂಘಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುವಂತೆ ಮಾಡುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇವರು ರಾಷ್ಟ್ರದ ಸಹಕಾರಿ ಮಂತ್ರಿ. ಆದರೆ ಇವರು ’ವಿಲೀನ’ದ ಮಾತನಾಡಿ ಕರ್ನಾಟಕ-ಗುಜರಾತ್ ನಡುವೆ ಅಸಹಕಾರ ಬೆಳೆಯುವಂತೆ ಮಾಡ್ಡಿದ್ದಾರೆ. ಈ ವಿಲೀನ ಎನ್ನುವುದು ಕರ್ನಾಟಕದ ಸಂದರ್ಭದಲ್ಲಿ ಅಪಾಯಕಾರಿಯಾಗಿ ಪರಿಣಮಿಸಿದೆ. ಸರ್ ಎಂ. ವಿಶ್ವೇಶ್ವರಯ್ಯ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಆರಂಭಿಸಿದ್ದ, ಕರ್ನಾಟಕದ ಆರ್ಥಿಕತೆಯ ಪ್ರತೀಕವಾಗಿದ್ದ ಮೈಸೂರು ಬ್ಯಾಂಕನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಲಾಯಿತು. ಈಗ ಮೈಸೂರು ಬ್ಯಾಂಕು ಇಲ್ಲ. ಅದು ಕೇವಲ ಒಂದು ಹಣಕಾಸಿನ ಬ್ಯಾಂಕಾಗಿರಲಿಲ್ಲ. ಕರ್ನಾಟಕದ ಅಸ್ಮಿತೆಯಾಗಿತ್ತು. ಬೆಂಗಳೂರಿನ ಒಂದು ಕೇಂದ್ರ ಸ್ಥಾನದಲ್ಲಿ ಮೈಸೂರು ಬ್ಯಾಂಕ್ ವೃತ್ತ ಇದೆ. ನಮಗೆ ಮೈಸೂರು

ಅಮಿತ್ ಶಾ

ಬ್ಯಾಂಕನ್ನು ಉಳಿಸಿಕೊಳ್ಳಲಾಗಲಿಲ್ಲ; ಮೈಸೂರು ಬ್ಯಾಂಕ್ ವೃತ್ತವನ್ನಾದರೂ ಉಳಿಸಿಕೊಳ್ಳೋಣ. ಇದನ್ನೂ ಬದಲಾಯಿಸಲು ಬಿಡಬಾರದು. ವಿಜಯ ಬ್ಯಾಂಕನ್ನು ಗುಜರಾತಿನ ಬರೋಡ ಬ್ಯಾಂಕಿನಲ್ಲಿ ವಿಲೀನಗೊಳಿಸಲಾಗಿದೆ. ಕರ್ನಾಟಕದ ಬಂದರುಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಮುಂತಾದವುಗಳ ನಿರ್ಮಾಣದ ಕ್ರಾಂಟ್ರಾಕ್ಟ್‌ಅನ್ನು ಗುಜರಾತಿನ ಆದಾನಿ ಎಂಬ ವ್ಯಾಪಾರಿಗೆ ನೀಡಲಾಗಿದೆ. ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಸಂಸ್ಥೆಯನ್ನು ಐಐಟಿ ರೀತಿಯ ಸಂಸ್ಥೆಯನ್ನಾಗಿ ಮಾಡುತ್ತೇವೆ ಎಂದು ಅದನ್ನು ನಾಶ ಮಾಡಲಾಗುತ್ತಿದೆ. ಸರ್ ಎಂ. ವಿಶ್ವೇಶ್ವರಯ್ಯ-ನಾಲ್ವಡಿ ಕೃಷ್ಣರಾಜ ಒಡೆಯರ್ 1924ರಲ್ಲಿ ಸ್ಥಾಪಿಸಿದ್ದ ’ವಿಐಎಸ್‌ಎಲ್’ ಸ್ಟೀಲ್ ಕಾರ್ಖಾನೆಯನ್ನು ಇಂದು ಮುಚ್ಚಲಾಗುತ್ತಿದೆ. ಇದೇ ರೀತಿಯ ಭಯಾನಕ ಸ್ಥಿತಿಯು ’ವಿಲೀನ’ ವಿವಾದದಿಂದ ನಂದಿನಿಗೂ ಬರಬಹುದು ಎಂಬ ಆತಂಕ ಜನತೆಯ ಮನದಲ್ಲಿ ಉಂಟಾಗಿದ್ದರೆ ಅದರಲ್ಲಿ ಸತ್ಯಾಂಶವಿಲ್ಲದಿಲ್ಲ.

ಇದನ್ನೂ ಓದಿ: ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಗುಜರಾತ್ ಹೇಳಿ ಕೇಳಿ ವ್ಯಾಪಾರಿಗಳ ನಾಡು. ಕರ್ನಾಟಕದ ಎಲ್ಲ ನಗರಗಳಲ್ಲಿಯೂ ಗುಜರಾತಿ ವ್ಯಾಪಾರಿಗಳಿದ್ದಾರೆ. ಇದರಿಂದ ನಮ್ಮ ಸಹಬಾಳ್ವೆಗೆ ಸಮಸ್ಯೆ ಉಂಟಾಗಿಲ್ಲ. ಆದರೆ ’ವಿಲೀನ’ ಇದೆಯಲ್ಲ ಇದು ಲಕ್ಷಾಂತರ ಕರ್ನಾಟಕಸ್ಥರ ಬಾಳಿಗೆ ಮಣ್ಣು ಹಾಕಲಿದೆ. ನಂದಿನಿ ಬ್ರಾಂಡಿನಲ್ಲಿ ವ್ಯವಹಾರ ನಡೆಸುತ್ತಿರುವ ಕರ್ನಾಟಕ ಮಿಲ್ಕ್ ಫೆಡರೇಶನ್ನಿನ ವಾರ್ಷಿಕ ವ್ಯವಹಾರ ರೂ.20000 ಕೋಟಿ. ಲಕ್ಷಾಂತರ ಹೈನುಗಾರರು, ವಿಶೇಷವಾಗಿ ಮಹಿಳೆಯರು ನಂದಿನಿಯ ಸುತ್ತ ಬೆಳೆದಿರುವ ಹಾಲು ಒಕ್ಕೂಟಗಳಿಂದ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರವು ಪ್ರತಿ ಲೀಟರ್ ಹಾಲಿಗೆ ಸಬ್ಸಿಡಿ ನೀಡುತ್ತಿದೆ. ಪಶು ಆಹಾರದ ಉದ್ದಿಮೆಯೂ ಬೆಳೆಯುತ್ತಿದೆ.

’ವಿಲೀನ’ವು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ!

ಅಮಿತ್ ಷಾ ಪ್ರತಿನಿಧಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳಿಗೆ ನಮ್ಮ ಸಂವಿಧಾನದತ್ತ ಒಕ್ಕೂಟ ತತ್ವದ ಬಗ್ಗೆ ನಂಬಿಕೆಯಿಲ್ಲ. ಸೈದ್ಧಾಂತಿಕವಾಗಿ ಅವರದ್ದು ಏಕರೂಪದ-ಕೇಂದ್ರೀಕೃತ ರಾಜಕೀಯದಲ್ಲಿ ನಂಬಿಕೆಯಿರುವ ಪಕ್ಷ. ರಾಜ್ಯಗಳ ಸ್ವಾಯತ್ತ ಬೆಳವಣಿಗೆಗೆ ’ವಿಲೀನ’ವು ಕಂಟಕಪ್ರಾಯವಾಗುತ್ತದೆ. ನಂದಿನಿ ಮತ್ತು ಅಮುಲ್ ಎರಡೂ ತಮ್ಮ ತಮ್ಮ ವ್ಯಾಪಾರ-ವ್ಯವಹಾರ, ಉತ್ಪಾದನೆ ನಡೆಸಿಕೊಂಡಿದ್ದರೆ ಅಮಿತ್ ಷಾಗೆ ಏನು ತೊಂದರೆ? ಇದೇ ರೀತಿಯ ಸಹಕಾರಿ ಹಾಲಿನ ಸಂಸ್ಥೆಗಳನ್ನು ಎಲ್ಲಾ ರಾಜ್ಯಗಳಲ್ಲೂ ಬೆಳೆಸಲು ಒಕ್ಕೂಟ ಸರ್ಕಾರ ಶ್ರಮ ಪಡಬೇಕೇ ವಿನಾ ನಂದಿನಿ-ಅಮುಲ್ ವಿಲೀನದ ಬಗ್ಗೆ ತಂತ್ರಗಾರಿಕೆ ಮಾಡುವುದಲ್ಲ. ಒಕ್ಕೂಟ ಸರ್ಕಾರ ನಂದಿನಿ ಬೆಳವಣಿಗೆಗೆ ಒಂದು ಬಿಡಿಗಾಸೂ ನೀಡುತ್ತಿಲ್ಲ. ಆದರೆ ಇದನ್ನು ಆಪೋಶನ ಮಾಡಿಕೊಳ್ಳಲು ಕಾಲು ಕೆರೆದುಕೊಂಡು ನಿಂತಿದೆ.

ಅಭಿವೃದ್ಧಿಯಲ್ಲಿ ಮುಂದಿರುವ ಕರ್ನಾಟಕ

ಅನೇಕ ಅಭಿವೃದ್ಧಿ ಸೂಚಿಗಳಲ್ಲಿ ಕರ್ನಾಟಕವು ಗುಜರಾತ್‌ಗಿಂತ ಮುಂದಿದೆ. ಉದಾ: 2020-21ರಲ್ಲಿ ಗುಜರಾತಿನ ಒಟ್ಟು ರಾಜ್ಯ ಆಂತರಿಕ ಉತ್ಪನ್ನ (ಜಿಎಸ್‌ಡಿಪಿ) ರೂ.14.59 ಲಕ್ಷ ಕೋಟಿಯಾದರೆ ಕರ್ನಾಟಕದ್ದು ರೂ.15.75 ಲಕ್ಷ ಕೋಟಿ. ತಲಾ ವರಮಾನ ಗುಜರಾತಿನದ್ದು ರೂ. 212821ರಷ್ಟಿದ್ದರೆ ಕರ್ನಾಟಕದ್ದು ರೂ.236451. ಜನಸಂಖ್ಯಾ ದಶಕವಾರು ಬೆಳವಣಿಗೆ (2001-2011) ಗುಜರಾತನಲ್ಲಿ ಶೇ.19.3ರಷ್ಟಿದ್ದರೆ ಕರ್ನಾಟಕದಲ್ಲಿ ಶೇ.15.6ರಷ್ಟಿದೆ. ಲಿಂಗ ಅನುಪಾತ ಗುಜರಾತಿನಲ್ಲಿ (2011) 919, ಕರ್ನಾಟಕದಲ್ಲಿ ಇದು 973. ಸಾಕ್ಷರತೆಯಲ್ಲಿ ಲಿಂಗ ಸಂಬಂಧಿ ಅಂತರ ಕರ್ನಾಟಕದಲ್ಲಿ ಶೇ.14.7 ಅಂಶಗಳಷ್ಟಿದ್ದರೆ ಗುಜರಾತಿನಲ್ಲಿ ಇದು ಶೇ.16.5 ಅಂಶಗಳಷ್ಟಿದೆ. ಶಿಶು ಮರಣ ಪ್ರಮಾಣ 2019-20ರಲ್ಲಿ ಪ್ರತಿ ಸಾವಿರ ಜನನಗಳಿಗೆ ಗುಜರಾತಿನಲ್ಲಿ 31ರಷ್ಟಿದ್ದರೆ ಕರ್ನಾಟಕದಲ್ಲಿ 25. ಗುಜರಾತ್ ಅಭಿವೃದ್ಧಿ ಮಾದರಿ ಎನ್ನುವುದು ಕೃತವಾಗಿ ಕಟ್ಟಿದ್ದೇ ವಿನಾ ನಿಜಸ್ಥಿತಿಯು ಮಾದರಿಯಾಗಿಲ್ಲ. ಆರ್ಥಿಕ ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ಮತ್ತು ಲಿಂಗ ಸಮಾನತೆಯಲ್ಲಿ ಕರ್ನಾಟಕದಿಂದ ಗುಜರಾತ್ ಪಾಠ ಕಲಿಯಬೇಕೇ ವಿನಾ ಗುಜರಾತಿನಿಂದ ಕರ್ನಾಟಕ ಕಲಿಯಬೇಕಾದುದೇನಿಲ್ಲ. ಆದ್ದರಿಂದ ನಂದಿನಿಯನ್ನು ಅದರ ಪಾಲಿಗೆ ಅದನ್ನು ಬಿಡುವುದು ಒಳ್ಳೆಯದು. ಅವರು ತಮ್ಮ ತವರು ರಾಜ್ಯದ ಅಭಿವೃದ್ಧಿಯ ಬಗ್ಗೆ ಕರ್ನಾಟಕದಿಂದ, ತಮಿಳುನಾಡಿನಿಂದ, ಕೇರಳದಿಂದ ಪಾಠ ಕಲಿತು ಅದನ್ನು ಉತ್ತಮಪಡಿಸಲಿ. ಅಮುಲ್-ನಂದಿನಿ ಮಾರುಕಟ್ಟೆ ಪೈಪೋಟಿಗೆ ಸ್ವಾಗತ. ಎರಡರ ವಿಲೀನಕ್ಕೆ ನಮ್ಮ ವಿರೋಧವಿದೆ.

ಡಾ. ಟಿ. ಆರ್. ಚಂದ್ರಶೇಖರ

ಡಾ. ಟಿ. ಆರ್. ಚಂದ್ರಶೇಖರ
ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿ.ವಿಯಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ-ಸಂಸ್ಕೃತಿಗಳ ಬಗ್ಗೆಯೂ ತಮ್ಮ ವಿಶಿಷ್ಟ ಚಿಂತನೆಗಳನ್ನು ಪ್ರಸ್ತುತ ಪಡಿಸುತ್ತಿರುವ ಮುಂಚೂಣಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...