Homeಕರ್ನಾಟಕನಂದಿನಿ ವರ್ಸಸ್ ಅಮುಲ್ ಪ್ರಶ್ನೆ ಮಾರುಕಟ್ಟೆ ಆಕ್ರಮಣವಲ್ಲ; ಇದು ವಿಲೀನದ ಆಕ್ರಮಣ

ನಂದಿನಿ ವರ್ಸಸ್ ಅಮುಲ್ ಪ್ರಶ್ನೆ ಮಾರುಕಟ್ಟೆ ಆಕ್ರಮಣವಲ್ಲ; ಇದು ವಿಲೀನದ ಆಕ್ರಮಣ

- Advertisement -
- Advertisement -

ಇಂದು ನಮ್ಮ ದೇಶ ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಬದುಕುತ್ತಿದೆ. ಅಮುಲ್ ಉತ್ಪನ್ನಗಳು (ಐಸ್‌ಕ್ರೀಮ್, ಚೀಸ್, ಬೆಣ್ಣೆ, ತುಪ್ಪ, ಪನ್ನೀರ್, ಪಿಜ್ಜಾ, ಚೀಸ್ ಪಿಜ್ಜಾ, ಚಾಕಲೇಟ್, ಭಾರತೀಯ ಸಿಹಿ ಪದಾರ್ಥಗಳು ಇತ್ಯಾದಿ) ಕರ್ನಾಟಕದಲ್ಲಿ ಬಹಳ ಹಿಂದಿನಿಂದ ಮಾರಾಟವಾಗುತ್ತಿವೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ, ದೊಡ್ಡ ನಗರಗಳಾದ ಮೈಸೂರು-ಬೆಂಗಳೂರು-ಮಂಗಳೂರುಗಳಲ್ಲಿ ಅಮುಲ್ ಉತ್ಪನ್ನಗಳು ಮಾರಾಟವಾಗುತ್ತಿವೆ. ಇದೀಗ ಬೆಂಗಳೂರಿನಲ್ಲಿ ಹಾಲು-ಮೊಸರು ಮಾರಾಟವನ್ನು ಆರಂಭಿಸುವುದರ ಬಗ್ಗೆ ಅಮುಲ್ ಸಾರ್ವಜನಿಕ ಹೇಳಿಕೆ ನೀಡಿದೆ. ಕರ್ನಾಟಕದಲ್ಲಿ ಅಮುಲ್‌ನ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ಅಭ್ಯಂತರಕ್ಕೆ ಕಾರಣವಿಲ್ಲ. ಈ ವಿವಾದದಲ್ಲಿನ ಮೂಲದಲ್ಲಿರುವ ’ನಂದಿನಿ-ಅಮುಲ್’ ವಿಲೀನದ ಪ್ರಶ್ನೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಮಾರುಕಟ್ಟೆ ಪ್ರವೇಶ ಮತ್ತು ವಿಲೀನಗಳ ನಡುವೆ ನಾವು ಗೊಂದಲ ಮಾಡಿಕೊಳ್ಳಬಾರದು. ಈಗ ನಂದಿನಿ ರಕ್ಷಣೆಯ ಬಗ್ಗೆ ಮತ್ತು ಅಮುಲ್ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವುದು ಅದರ ಮಾರುಕಟ್ಟೆ ಪ್ರವೇಶದ ಬಗ್ಗೆಯಲ್ಲ. ಆದರೆ ಕರ್ನಾಟಕದ ಆಳುವ ಪಕ್ಷವು ಅಮಿತ್ ಷಾ ಹಮ್ಮಿಕೊಂಡಿರುವ ವಿಲೀನದ ಪ್ರಶ್ನೆಯನ್ನು ಮರೆಮಾಡಿ ಅಮುಲ್ ಮಾರುಕಟ್ಟೆ ಪ್ರವೇಶದ ಬಗ್ಗೆ ಮಾತ್ರ ಮಾತನಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಯಾಗಿ ವಿಲೀನದ ಪ್ರಶ್ನೆಯನ್ನು ಮುಂಚೂಣಿಗೆ ತಂದಿದ್ದಾರೆ. ಅಮಿತ್ ಷಾ ಅವರು ಒಕ್ಕೂಟ ಸರ್ಕಾರದ ಸಹಕಾರ ಮಂತ್ರಿ. ಇವರು ಯಾವುದೇ ಪೂರ್ವ ಸಿದ್ಧತೆಯಿಲ್ಲದೆ, ವಿನಾಕಾರಣವಾಗಿ-ಉದ್ದೇಶರಹಿತವಾಗಿ ಅಮುಲ್-ನಂದಿನಿ ವಿಲೀನದ ಯೋಜನೆಯನ್ನು ಮುಂದಿಡುವವರಲ್ಲ. ಇಲ್ಲಿರುವ ಅಪಾಯವನ್ನು ನಾವು ಗುರುತಿಸಬೇಕು.

ಅಮುಲ್-ನಂದಿನಿ ಪೈಪೋಟಿ

ಇದು ಕೇವಲ ಮಾರುಕಟ್ಟೆ ಪ್ರವೇಶದ ಬಗ್ಗೆಯಾಗಿದ್ದರೆ ನಾವು ಭಯ ಪಡಬೇಕಾಗಿರಲಿಲ್ಲ. ಏಕೆಂದರೆ ಮಾರುಕಟ್ಟೆ ಪೈಪೋಟಿಯಲ್ಲಿ ನಂದಿನಿಯು ಅಮುಲ್‌ಗಿಂತ ಉತ್ತಮ ಸ್ಥಾನದಲ್ಲಿದೆ. ಅಮುಲ್ ಹಾಲು ಲೀಟರ್‌ಗೆ ರೂ. 65; ನಂದಿನಿ ಹಾಲು ರೂ. 49. ಅಮುಲ್ ಮೊಸರು ಲೀಟರ್‌ಗೆ ರೂ. 67; ನಂದಿನಿ ಮೊಸರು ರೂ. 47. ಕೆನೆಭರಿತ ಹಾಲಿನ ಬೆಲೆ ಅಮುಲ್ ರೂ. 64. ನಂದಿನಿಯದ್ದು 900 ಮಿಲಿಲೀಟರ್‌ಗೆ ರೂ. 50. ಅಮುಲ್ ದೇಶದಲ್ಲಿ ಪ್ರಥಮ ಸ್ಥಾನದಲ್ಲಿರುವ ಹಾಲು ಸಹಕಾರ ಸಂಸ್ಥೆಯಾದರೆ ನಂದಿನಿ ದೇಶದಲ್ಲಿ ಎರಡನೆಯ ಸ್ಥಾನದಲ್ಲಿದೆ. ಅಮುಲ್ ಹೇಗೆ ಗುಜರಾತಿನ ಹೊರಗೆ ತನ್ನ ವ್ಯವಹಾರವನ್ನು ಬೆಳೆಸುತ್ತಿದೆಯೋ ಅದೇ ರೀತಿಯಲ್ಲಿ ನಂದಿನಿಯು ತನ್ನ ವ್ಯಾಪಾರವನ್ನು ರಾಜ್ಯದ ಹೊರಗೆ ಬೆಳೆಸುತ್ತಿದೆ. ಉದಾ: ಪ್ರತಿ ದಿನ ನಂದಿನಿ 2.5 ಲಕ್ಷ ಲೀಟರ್ ಹಾಲನ್ನು ಮುಂಬೈಗೆ ರವಾನಿಸುತ್ತಿದೆ. ಹೈದರಾಬಾದಿಗೆ ದಿನನಿತ್ಯ 1.5 ಲಕ್ಷ ಲೀಟರ್ ಹಾಲನ್ನು ರವಾನಿಸುತ್ತಿದೆ. ತಮಿಳುನಾಡಿನಲ್ಲಿಯೂ ಮಾರಾಟ ಮಾಡುತ್ತಿದೆ.

ಅಮಿತ್ ಷಾ ಸೃಷ್ಟಿಸಿದ ವಿವಾದ!

ಕಳೆದ ಕೆಲವು ತಿಂಗಳುಗಳ ಹಿಂದೆ ಒಕ್ಕೂಟ ಸರ್ಕಾರದ ಗೃಹ-ಸಹಕಾರ ಮಂತ್ರಿ ಅಮಿತ್ ಷಾ ಅವರು ಮಂಡ್ಯದಲ್ಲಿ ಮಾತನಾಡುತ್ತಾ ’ನಂದಿನಿ-ಅಮುಲ್ ಸಹಕಾರಿ ಸಂಘಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುವಂತೆ ಮಾಡುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇವರು ರಾಷ್ಟ್ರದ ಸಹಕಾರಿ ಮಂತ್ರಿ. ಆದರೆ ಇವರು ’ವಿಲೀನ’ದ ಮಾತನಾಡಿ ಕರ್ನಾಟಕ-ಗುಜರಾತ್ ನಡುವೆ ಅಸಹಕಾರ ಬೆಳೆಯುವಂತೆ ಮಾಡ್ಡಿದ್ದಾರೆ. ಈ ವಿಲೀನ ಎನ್ನುವುದು ಕರ್ನಾಟಕದ ಸಂದರ್ಭದಲ್ಲಿ ಅಪಾಯಕಾರಿಯಾಗಿ ಪರಿಣಮಿಸಿದೆ. ಸರ್ ಎಂ. ವಿಶ್ವೇಶ್ವರಯ್ಯ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಆರಂಭಿಸಿದ್ದ, ಕರ್ನಾಟಕದ ಆರ್ಥಿಕತೆಯ ಪ್ರತೀಕವಾಗಿದ್ದ ಮೈಸೂರು ಬ್ಯಾಂಕನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಲಾಯಿತು. ಈಗ ಮೈಸೂರು ಬ್ಯಾಂಕು ಇಲ್ಲ. ಅದು ಕೇವಲ ಒಂದು ಹಣಕಾಸಿನ ಬ್ಯಾಂಕಾಗಿರಲಿಲ್ಲ. ಕರ್ನಾಟಕದ ಅಸ್ಮಿತೆಯಾಗಿತ್ತು. ಬೆಂಗಳೂರಿನ ಒಂದು ಕೇಂದ್ರ ಸ್ಥಾನದಲ್ಲಿ ಮೈಸೂರು ಬ್ಯಾಂಕ್ ವೃತ್ತ ಇದೆ. ನಮಗೆ ಮೈಸೂರು

ಅಮಿತ್ ಶಾ

ಬ್ಯಾಂಕನ್ನು ಉಳಿಸಿಕೊಳ್ಳಲಾಗಲಿಲ್ಲ; ಮೈಸೂರು ಬ್ಯಾಂಕ್ ವೃತ್ತವನ್ನಾದರೂ ಉಳಿಸಿಕೊಳ್ಳೋಣ. ಇದನ್ನೂ ಬದಲಾಯಿಸಲು ಬಿಡಬಾರದು. ವಿಜಯ ಬ್ಯಾಂಕನ್ನು ಗುಜರಾತಿನ ಬರೋಡ ಬ್ಯಾಂಕಿನಲ್ಲಿ ವಿಲೀನಗೊಳಿಸಲಾಗಿದೆ. ಕರ್ನಾಟಕದ ಬಂದರುಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಮುಂತಾದವುಗಳ ನಿರ್ಮಾಣದ ಕ್ರಾಂಟ್ರಾಕ್ಟ್‌ಅನ್ನು ಗುಜರಾತಿನ ಆದಾನಿ ಎಂಬ ವ್ಯಾಪಾರಿಗೆ ನೀಡಲಾಗಿದೆ. ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಸಂಸ್ಥೆಯನ್ನು ಐಐಟಿ ರೀತಿಯ ಸಂಸ್ಥೆಯನ್ನಾಗಿ ಮಾಡುತ್ತೇವೆ ಎಂದು ಅದನ್ನು ನಾಶ ಮಾಡಲಾಗುತ್ತಿದೆ. ಸರ್ ಎಂ. ವಿಶ್ವೇಶ್ವರಯ್ಯ-ನಾಲ್ವಡಿ ಕೃಷ್ಣರಾಜ ಒಡೆಯರ್ 1924ರಲ್ಲಿ ಸ್ಥಾಪಿಸಿದ್ದ ’ವಿಐಎಸ್‌ಎಲ್’ ಸ್ಟೀಲ್ ಕಾರ್ಖಾನೆಯನ್ನು ಇಂದು ಮುಚ್ಚಲಾಗುತ್ತಿದೆ. ಇದೇ ರೀತಿಯ ಭಯಾನಕ ಸ್ಥಿತಿಯು ’ವಿಲೀನ’ ವಿವಾದದಿಂದ ನಂದಿನಿಗೂ ಬರಬಹುದು ಎಂಬ ಆತಂಕ ಜನತೆಯ ಮನದಲ್ಲಿ ಉಂಟಾಗಿದ್ದರೆ ಅದರಲ್ಲಿ ಸತ್ಯಾಂಶವಿಲ್ಲದಿಲ್ಲ.

ಇದನ್ನೂ ಓದಿ: ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಗುಜರಾತ್ ಹೇಳಿ ಕೇಳಿ ವ್ಯಾಪಾರಿಗಳ ನಾಡು. ಕರ್ನಾಟಕದ ಎಲ್ಲ ನಗರಗಳಲ್ಲಿಯೂ ಗುಜರಾತಿ ವ್ಯಾಪಾರಿಗಳಿದ್ದಾರೆ. ಇದರಿಂದ ನಮ್ಮ ಸಹಬಾಳ್ವೆಗೆ ಸಮಸ್ಯೆ ಉಂಟಾಗಿಲ್ಲ. ಆದರೆ ’ವಿಲೀನ’ ಇದೆಯಲ್ಲ ಇದು ಲಕ್ಷಾಂತರ ಕರ್ನಾಟಕಸ್ಥರ ಬಾಳಿಗೆ ಮಣ್ಣು ಹಾಕಲಿದೆ. ನಂದಿನಿ ಬ್ರಾಂಡಿನಲ್ಲಿ ವ್ಯವಹಾರ ನಡೆಸುತ್ತಿರುವ ಕರ್ನಾಟಕ ಮಿಲ್ಕ್ ಫೆಡರೇಶನ್ನಿನ ವಾರ್ಷಿಕ ವ್ಯವಹಾರ ರೂ.20000 ಕೋಟಿ. ಲಕ್ಷಾಂತರ ಹೈನುಗಾರರು, ವಿಶೇಷವಾಗಿ ಮಹಿಳೆಯರು ನಂದಿನಿಯ ಸುತ್ತ ಬೆಳೆದಿರುವ ಹಾಲು ಒಕ್ಕೂಟಗಳಿಂದ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರವು ಪ್ರತಿ ಲೀಟರ್ ಹಾಲಿಗೆ ಸಬ್ಸಿಡಿ ನೀಡುತ್ತಿದೆ. ಪಶು ಆಹಾರದ ಉದ್ದಿಮೆಯೂ ಬೆಳೆಯುತ್ತಿದೆ.

’ವಿಲೀನ’ವು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ!

ಅಮಿತ್ ಷಾ ಪ್ರತಿನಿಧಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳಿಗೆ ನಮ್ಮ ಸಂವಿಧಾನದತ್ತ ಒಕ್ಕೂಟ ತತ್ವದ ಬಗ್ಗೆ ನಂಬಿಕೆಯಿಲ್ಲ. ಸೈದ್ಧಾಂತಿಕವಾಗಿ ಅವರದ್ದು ಏಕರೂಪದ-ಕೇಂದ್ರೀಕೃತ ರಾಜಕೀಯದಲ್ಲಿ ನಂಬಿಕೆಯಿರುವ ಪಕ್ಷ. ರಾಜ್ಯಗಳ ಸ್ವಾಯತ್ತ ಬೆಳವಣಿಗೆಗೆ ’ವಿಲೀನ’ವು ಕಂಟಕಪ್ರಾಯವಾಗುತ್ತದೆ. ನಂದಿನಿ ಮತ್ತು ಅಮುಲ್ ಎರಡೂ ತಮ್ಮ ತಮ್ಮ ವ್ಯಾಪಾರ-ವ್ಯವಹಾರ, ಉತ್ಪಾದನೆ ನಡೆಸಿಕೊಂಡಿದ್ದರೆ ಅಮಿತ್ ಷಾಗೆ ಏನು ತೊಂದರೆ? ಇದೇ ರೀತಿಯ ಸಹಕಾರಿ ಹಾಲಿನ ಸಂಸ್ಥೆಗಳನ್ನು ಎಲ್ಲಾ ರಾಜ್ಯಗಳಲ್ಲೂ ಬೆಳೆಸಲು ಒಕ್ಕೂಟ ಸರ್ಕಾರ ಶ್ರಮ ಪಡಬೇಕೇ ವಿನಾ ನಂದಿನಿ-ಅಮುಲ್ ವಿಲೀನದ ಬಗ್ಗೆ ತಂತ್ರಗಾರಿಕೆ ಮಾಡುವುದಲ್ಲ. ಒಕ್ಕೂಟ ಸರ್ಕಾರ ನಂದಿನಿ ಬೆಳವಣಿಗೆಗೆ ಒಂದು ಬಿಡಿಗಾಸೂ ನೀಡುತ್ತಿಲ್ಲ. ಆದರೆ ಇದನ್ನು ಆಪೋಶನ ಮಾಡಿಕೊಳ್ಳಲು ಕಾಲು ಕೆರೆದುಕೊಂಡು ನಿಂತಿದೆ.

ಅಭಿವೃದ್ಧಿಯಲ್ಲಿ ಮುಂದಿರುವ ಕರ್ನಾಟಕ

ಅನೇಕ ಅಭಿವೃದ್ಧಿ ಸೂಚಿಗಳಲ್ಲಿ ಕರ್ನಾಟಕವು ಗುಜರಾತ್‌ಗಿಂತ ಮುಂದಿದೆ. ಉದಾ: 2020-21ರಲ್ಲಿ ಗುಜರಾತಿನ ಒಟ್ಟು ರಾಜ್ಯ ಆಂತರಿಕ ಉತ್ಪನ್ನ (ಜಿಎಸ್‌ಡಿಪಿ) ರೂ.14.59 ಲಕ್ಷ ಕೋಟಿಯಾದರೆ ಕರ್ನಾಟಕದ್ದು ರೂ.15.75 ಲಕ್ಷ ಕೋಟಿ. ತಲಾ ವರಮಾನ ಗುಜರಾತಿನದ್ದು ರೂ. 212821ರಷ್ಟಿದ್ದರೆ ಕರ್ನಾಟಕದ್ದು ರೂ.236451. ಜನಸಂಖ್ಯಾ ದಶಕವಾರು ಬೆಳವಣಿಗೆ (2001-2011) ಗುಜರಾತನಲ್ಲಿ ಶೇ.19.3ರಷ್ಟಿದ್ದರೆ ಕರ್ನಾಟಕದಲ್ಲಿ ಶೇ.15.6ರಷ್ಟಿದೆ. ಲಿಂಗ ಅನುಪಾತ ಗುಜರಾತಿನಲ್ಲಿ (2011) 919, ಕರ್ನಾಟಕದಲ್ಲಿ ಇದು 973. ಸಾಕ್ಷರತೆಯಲ್ಲಿ ಲಿಂಗ ಸಂಬಂಧಿ ಅಂತರ ಕರ್ನಾಟಕದಲ್ಲಿ ಶೇ.14.7 ಅಂಶಗಳಷ್ಟಿದ್ದರೆ ಗುಜರಾತಿನಲ್ಲಿ ಇದು ಶೇ.16.5 ಅಂಶಗಳಷ್ಟಿದೆ. ಶಿಶು ಮರಣ ಪ್ರಮಾಣ 2019-20ರಲ್ಲಿ ಪ್ರತಿ ಸಾವಿರ ಜನನಗಳಿಗೆ ಗುಜರಾತಿನಲ್ಲಿ 31ರಷ್ಟಿದ್ದರೆ ಕರ್ನಾಟಕದಲ್ಲಿ 25. ಗುಜರಾತ್ ಅಭಿವೃದ್ಧಿ ಮಾದರಿ ಎನ್ನುವುದು ಕೃತವಾಗಿ ಕಟ್ಟಿದ್ದೇ ವಿನಾ ನಿಜಸ್ಥಿತಿಯು ಮಾದರಿಯಾಗಿಲ್ಲ. ಆರ್ಥಿಕ ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ಮತ್ತು ಲಿಂಗ ಸಮಾನತೆಯಲ್ಲಿ ಕರ್ನಾಟಕದಿಂದ ಗುಜರಾತ್ ಪಾಠ ಕಲಿಯಬೇಕೇ ವಿನಾ ಗುಜರಾತಿನಿಂದ ಕರ್ನಾಟಕ ಕಲಿಯಬೇಕಾದುದೇನಿಲ್ಲ. ಆದ್ದರಿಂದ ನಂದಿನಿಯನ್ನು ಅದರ ಪಾಲಿಗೆ ಅದನ್ನು ಬಿಡುವುದು ಒಳ್ಳೆಯದು. ಅವರು ತಮ್ಮ ತವರು ರಾಜ್ಯದ ಅಭಿವೃದ್ಧಿಯ ಬಗ್ಗೆ ಕರ್ನಾಟಕದಿಂದ, ತಮಿಳುನಾಡಿನಿಂದ, ಕೇರಳದಿಂದ ಪಾಠ ಕಲಿತು ಅದನ್ನು ಉತ್ತಮಪಡಿಸಲಿ. ಅಮುಲ್-ನಂದಿನಿ ಮಾರುಕಟ್ಟೆ ಪೈಪೋಟಿಗೆ ಸ್ವಾಗತ. ಎರಡರ ವಿಲೀನಕ್ಕೆ ನಮ್ಮ ವಿರೋಧವಿದೆ.

ಡಾ. ಟಿ. ಆರ್. ಚಂದ್ರಶೇಖರ

ಡಾ. ಟಿ. ಆರ್. ಚಂದ್ರಶೇಖರ
ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿ.ವಿಯಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ-ಸಂಸ್ಕೃತಿಗಳ ಬಗ್ಗೆಯೂ ತಮ್ಮ ವಿಶಿಷ್ಟ ಚಿಂತನೆಗಳನ್ನು ಪ್ರಸ್ತುತ ಪಡಿಸುತ್ತಿರುವ ಮುಂಚೂಣಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...