Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...