Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...