Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...