Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...