Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...