Homeಕರ್ನಾಟಕನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ನಿಧಿ ಅನ್ಯಕಾರ್ಯಕ್ಕೆ ಬಳಕೆ; ಬಿಜೆಪಿ ನಡೆಗೆ ವಿರೋಧ

- Advertisement -
- Advertisement -

ನಂಜನಗೂಡು ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನಿಧಿಯನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ವರದಿ ಮಾಡಿರುವ ‘ಪ್ರಜಾವಾಣಿ’ ದಿನಪತ್ರಿಕೆ, “ದೇವಸ್ಥಾನದ ಆದಾಯವನ್ನು ಅದೇ ದೇವಾಲಯದ ಜೀರ್ಣೋದ್ಧಾರಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ, ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ ವಿವಿಧ ಜನಾಂಗದವರ ಸಮುದಾಯ ಭವನಗಳನ್ನು ನಿರ್ಮಿಸಲು ₹ 8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ” ಎಂದು ವಿವರಿಸಿದೆ.

ಕಾಯ್ದೆಯನ್ನು ಉಲ್ಲಂಘಿಸಿ ಹಣ ಬಳಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆಂದು ವರದಿ ಗಮನ ಸೆಳೆದಿದೆ. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ರ ಕಲಂ 36ರ ಅಡಿ, ಆಯಾ ದೇಗುಲದ ಆದಾಯವನ್ನು ಅದೇ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಹೀಗಾಗಿ, ವಿವಿಧ ಜನಾಂಗದವರ ಸಮುದಾಯ ಭವನಗಳಿಗೆ ದೇವಾಲಯ ನಿಧಿಯ ಬಳಕೆ ಸೂಕ್ತವಲ್ಲ ಎಂದು ಮುಜರಾಯಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದ್ದರೂ, ಶಾಸಕರ ಮನವಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದೆ” ಎಂಬುದು ಬಯಲಾಗಿದೆ.

ಬಿಜೆಪಿ ಸರ್ಕಾರದ ಈ ನಡೆಗೆ ಟೀಕೆಗಳು ವ್ಯಕ್ತವಾಗಿವೆ. ಈ ಕುರಿತು ಪೋಸ್ಟ್ ಮಾಡಿರುವ ಕವಿ ರಾಜೇಂದ್ರ ಪ್ರಸಾದ್, “ದೇವಸ್ಥಾನದ ಹಣವನ್ನು ಬೇರೆ ಯಾವುದಕ್ಕೂ ಬಳಸಿಕೊಳ್ಳಬಾರದು ಎಂದು ಬೊಬ್ಬೆ ಹೊಡಿಯುವವರೂ ಇವರೇ ಕಡೆಗೆ ಅದನ್ನು ಬೇಕಾದ ಹಾಗೆ ಮುಜರಾಯಿ ಇಲಾಖೆಯ ಸೂಚನೆಯನ್ನು ಮೀರಿ ಬಳಸಿಕೊಳ್ಳುವರೂ ಇವರೇ. ಒಟ್ಟಿನಲ್ಲಿ ದೇವರು, ದೇವಸ್ಥಾನ ಮತ್ತು ಅಲ್ಲಿನ‌ ಹಣ ಎಲ್ಲವನ್ನೂ ತಮ್ಮ‌ ದುರುದ್ದೇಶಗಳಿಗೆ ಬಳಸಿಕೊಳ್ಳುವುದರಲ್ಲಿ ಈ ಪಕ್ಷದವರು ಎತ್ತಿದ ಕೈ” ಎಂದು ಟೀಕಿಸಿದ್ದಾರೆ.

“ಈ ಹತ್ತಾರು ಜಾತಿಗಳ ಹೆಸರಲ್ಲಿ ಸಮುದಾಯ ಭವನಗಳು ಏಕೆ ಬೇಕು? ಕಟ್ಟಡಗಳಲ್ಲಿ ಗುಣಮಟ್ಟವಿರುವುದಿಲ್ಲ, ಕಡೆಗೆ ಅಲ್ಲಿ ಕಾರ್ಯಕ್ರಮ ಮಾಡಲು ಬೇಕಾದಷ್ಟು ವ್ಯವಸ್ಥೆಗಳು ಇರುವುದಿಲ್ಲ. ಹೋಗಲಿ ಒಂದು ತಾಲೂಕು ಮಟ್ಟದಲ್ಲಿ ಇಷ್ಟು ಬಗೆಯ ಜಾತಿಗಳಿಗೆ ಸಮುದಾಯ ಭವನಗಳನ್ನು ಕಟ್ಟುವ ಅಗತ್ಯವಾದರೂ ಏನಿದೆ? ಅದಕ್ಕಾಗಿ ದೇವಸ್ಥಾನದ ಹಣವನ್ನು ಬಲವಂತವಾಗಿ ಏಕೆ ಪಡೆದುಕೊಳ್ಳಲಾಗುತ್ತಿದೆ? ಇದು ಅನ್ಯಾಯ ಅಕ್ರಮ ಎನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅದೂ ಹೋಗಲಿ ದೇವಸ್ಥಾನ ಆವರಣದಲ್ಲಿ ಕಟ್ಟುತ್ತಿರುವ ಕೆಲವು ಕಟ್ಟಡ ಮತ್ತಿತರ ಸೌಲಭ್ಯಗಳಿಗೇ ಅಲ್ಲಿರುವ ಹಣ ಸಾಲುತ್ತಿಲ್ಲ ಎಂದು ಮುಜರಾಯಿ ಇಲಾಖೆಯೇ ಹೇಳುತ್ತಿದೆ, ಹಾಗಿರುವ ಬಲವಂತವಾಗಿ 8 ಕೋಟಿ ರುಪಾಯಿ ಪಡೆಯುವುದು ಅಧರ್ಮವಲ್ಲವೇ? ಹಾ! ಈ ಎಲ್ಲ ಯೋಜನೆಗಳಲ್ಲಿ ಎಷ್ಟು ಪರ್ಸೆಂಟು ಶಾಸಕರಿಗೆ / ಪಕ್ಷದವರಿಗೆ ಸಲ್ಲುತ್ತದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೆ? ಈಗಾಗಲೇ ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುದು ಜನಜನಿತವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...