Homeಕರ್ನಾಟಕಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ಇಂದು ಬಿಡುಗಡೆ ಮಾಡಲಾಯಿತು.

- Advertisement -
- Advertisement -

“ರೈತ ಬಳಸುವ ಬಾರುಕೋಲನ್ನು ತನ್ನ ರೂಲ್‌ ಆಫ್‌ ಲಾ ಎಂದವರು ಪ್ರೊ.ನಂಜುಂಡಸ್ವಾಮಿ” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಪ್ರೊ.ಎನ್‌ಡಿಎಂ ಅವರಿಗೆ ಜಗತ್ತಿನ ಎಲ್ಲ ಸಮಸ್ಯೆಗಳೂ ಗೊತ್ತಿದ್ದವು. ಬಹಳ ಓದಿಕೊಂಡಿದ್ದರು. ಅವರ ಒಂದು ಸ್ವಭಾವ ಏನೆಂದರೆ ಬೇರೆಯವರ ಅಭಿಪ್ರಾಯಕ್ಕೆ ಅಷ್ಟಾಗಿ ಬೆಲೆ ಕೊಡುತ್ತಿರಲಿಲ್ಲ. ಅವರು ಹೇಳಿದ್ದೇ ಸರಿ ಅಂತ ಒಪ್ಪಿಕೊಳ್ಳಬೇಕಿತ್ತು. ಒಪ್ಪಿಕೊಳ್ಳದಿದ್ದರೆ ತೋರು ಬೆರಳು ತೋರಿಸಿ- ನಿನಗೆ ಗೊತ್ತಿಲ್ಲ, ನೀನು ಓದಿಕೊಂಡಿಲ್ಲ ಕುಳಿತುಕೋ ಎನ್ನುತ್ತಿದ್ದರು” ಎಂದು ಪ್ರೊಫೆಸರ್‌ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾನು ರಾಜಕಾರಣಕ್ಕೆ ಬರಲು ಕಾರಣರಾದವರು ಪ್ರೊ.ಎಂಡಿಎನ್‌. ಅವರೊಂದಿಗೆ ರಾಜಕೀಯ ಚರ್ಚೆಗಳನ್ನು ನಡೆಸುತ್ತಿದ್ದೆವು. ರಾಮಮನೋಹರ್‌ ಲೋಹಿಯಾ ಅವರು ಹೊರತರುತ್ತಿದ್ದ ‘ಮ್ಯಾನ್‌ಕೈಂಡ್‌’ ವಾರ ಪತ್ರಿಕೆಯನ್ನು ಕನ್ನಡದಲ್ಲಿ ‘ಮಾನವ’ ಎಂದು ಪ್ರಕಟಿಸಲಾಗುತ್ತಿತ್ತು. ಆಂದೋಲನ ಪತ್ರಿಕೆಯ ಸಂಸ್ಥಾಪಕರಾದ ರಾಜಶೇಖರ್‌ ಕೋಟಿಯವರು ಮೈಸೂರು ಕೆ.ಆರ್‌.ಸರ್ಕಲ್‌ನಲ್ಲಿ ಮಾನವ ಪತ್ರಿಕೆಯನ್ನು ಮಾರುತ್ತಿದ್ದರು. ನಂತರ ನಂಜುಂಡಸ್ವಾಮಿಯವರು ಬೆಂಗಳೂರಿಗೆ ಬಂದರು ಎಂದು ತಿಳಿಸಿದರು.

ಪ್ರೊ.ನಂಜುಂಡಸ್ವಾಮಿಯವರ ಪರಿಚಯವಾದದ್ದು 1969ನೇ ಇಸವಿಯಲ್ಲಿ. ನಂಜುಂಡಸ್ವಾಮಿಯವರು ಶಾರದಾ ವಿಲಾಸ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಅವರು ನಮಗೆ ತರಗತಿಯಲ್ಲಿ ಪಾಠ ಮಾಡಿದ ಗುರುಗಳಾಗಿರಲಿಲ್ಲ. ರಾಜಕೀಯ ಗುರುಗಳಾಗಿದ್ದರು. ನಾನು, ಬಸವರಾಜು, ನರೇಂದ್ರ, ಲಿಂಗಪ್ಪ, ಅಣ್ಣೇಗೌಡ ಯಾವಾಗಲೂ ಎಂಡಿಎನ್‌ ಜೊತೆ ಇರುತ್ತಿದ್ದೆವು. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದ್ದ ಸ್ಟುಡೆಂಟ್ ಯೂನಿಯನ್‌ ಚುನಾವಣೆಯನ್ನು ಪ್ರಶ್ನಿಸುವಂತೆ ಎಂಡಿಎನ್‌ ನಮಗೆ ಸೂಚಿಸಿದ್ದರು. ನಮ್ಮ ಆಗ್ರಹಕ್ಕೆ ಮಣಿದು ಒಂದು ವರ್ಷದ ನಂತರ ಬದಲಾವಣೆ ತರಲಾಯಿತು ಎಂದು ನೆನಪಿಸಿಕೊಂಡರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಸಿದ್ದರಾಮಯ್ಯನವರು ಧರಿಸಿದ್ದು ಹೀಗೆ…

ತರಗತಿ ಮುಗಿದ ಮೇಲೆ ನಂಜುಂಡಸ್ವಾಮಿ ಅವರ ಜೊತೆಯಲ್ಲಿ ಕ್ಯಾಂಟೀನ್‌ಗೆ ಹೋಗುತ್ತಿದ್ದೆವು. ನಮಗೆ ಚಾರ್‌ಮಿನಾರ್‌ ಸಿಗರೇಟ್ ಹಾಗೂ ಅರ್ಧ ಗಂಟೆಗೊಮ್ಮೆ ಟೀ ಕೊಡಿಸುತ್ತಿದ್ದರು. ಚರ್ಚಿಸುತ್ತಿದ್ದರು. ಅಲ್ಲಿಯವರೆಗೆ ರಾಜಕಾರಣದ ಗಂಧಗಾಳಿ ಗೊತ್ತಿರಲಿಲ್ಲ. ನಾನು ರಾಜಕೀಯಕ್ಕೆ ಬರಲು ಎನ್‌ಡಿಎಂ ಕಾರಣಕರ್ತರು. ನಂತರ ಸಮಾಜವಾದಿ ಯುವಜನ ಸಭಾ ಸೇರಿದೆ. ಅಲ್ಲಿಂದ ರಾಜಕೀಯ ಶುರುವಾಯಿತು ಎಂದು ಹೇಳಿದರು.

ರೈತ ಚಳವಳಿಯ ಬಹಳ ಎತ್ತರಕ್ಕೆ ಹೋಗಿತ್ತು. ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಎರಡು ವರ್ಷ ಸಕ್ರಿಯವಾಗಿ ರೈತ ಸಂಘದಲ್ಲಿ ಇದ್ದೆ. ಈ ಧೈರ್ಯಕ್ಕೆ, ಅಧಿಕಾರಿಗಳ ವಿರುದ್ಧ ಮಾತನಾಡಲಿಕ್ಕೆ ಪ್ರೊಫೆಸರ್‌ ಕಾರಣ. ಸರ್ಕಾರಿ ವಾಹನಗಳನ್ನು ವೈಯಕ್ತಿಕ ಕೆಲಸಗಳಿಗೆ ಅಧಿಕಾರಿಗಳು ಬಳಸಿದರೆ ಚೆಕ್‌ ಮಾಡಲು ನಮಗೆ ಪ್ರೊಫೆಸರ್‌ ತಿಳಿಸಿದ್ದರು. ನಾವು ತಾಲ್ಲೂಕು ಕಚೇರಿಗೆ ಹೋದರೆ ಎಲ್ಲ ಅಧಿಕಾರಿಗಳು ಅಲರ್ಟ್ ಆಗುತ್ತಿದ್ದರು. ಅಧಿಕಾರಿಗಳು ಲಂಚ ತೆಗೆದುಕೊಳ್ಳಲು ಹೆದರುತ್ತಿದ್ದರು. ಅದಕ್ಕೆ ನಂಜುಂಡಸ್ವಾಮಿಯವರು ಕಾರಣ ಎಂದು ಶ್ಲಾಘಿಸಿದರು.

ರೈತ ಸಂಘವು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಆಗ್ರಹಿಸಿದೆವು. ಎನ್‌.ಡಿ.ಸುಂದರೇಶ್‌, ಕಡಿದಾಳು ಶಾಮಣ್ಣ ವಿರೋಧಿಸಿದರು. ನಾವು ಚುನಾವಣೆಗೆ ನಿಲ್ಲಬೇಕೆಂದು ಆಗ್ರಹಿಸಿ ವಾಕ್‌ಔಟ್ ಮಾಡಿದೆವು. ಅದಾದ ಮೇಲೆ ಸಂಪರ್ಕ ಕಡಿಮೆಯಾಯಿತು ಎಂದು ವಿಷಾದಿಸಿದರು.

ರೈತರೊಂದಿಗೆ ಅಂದಿನ ಮುಖ್ಯಮಂತ್ರಿ ಗುಂಡೂರಾಯರು ಒಂದು ಸಭೆ ಏರ್ಪಾಡು ಮಾಡಿದ್ದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನು ಉದ್ದೇಶಿಸಿ ಪ್ರೊಫೆಸರ್‌, ಆ ದೊಡ್ಡ ಕೂಲಿ ಇದ್ದಾನಲ್ಲ, ಆತ ಎದ್ದು ಹೋದರೆ ಮಾತ್ರ ನಾನು ಮಾತನಾಡೋದು ಎಂದು ಮುಖ್ಯಮಂತ್ರಿಗೆ ತಿಳಿಸಿದ್ದರು.  ಅಷ್ಟು ಧೈರ್ಯ ಅವರಿಗಿತ್ತು ಎಂದು ಸ್ಮರಿಸಿದರು.

ಪ್ರಜಾಪ್ರಭುತ್ವ, ಸಮಾಜವಾದ, ಸಂವಿಧಾನ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅವರದ್ದೇ ಆದ ಚಿಂತನೆಗಳಿದ್ದವು. ಅವರ ಎಲ್ಲ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆಗದಿದ್ದರೂ ಕೆಲವೊಂದು ವಿಚಾರಗಳನ್ನು ಮೈಗೂಡಿಸಿಕೊಂಡಿದ್ದೇವೆ. ಇಂದಿಗೂ ನಂಜುಂಡಸ್ವಾಮಿಯವರ ಚಿಂತನೆಗಳು ಬಹಳ ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಕೈಯಲಿದ್ದ ಚಾಟಿಯನ್ನು ಜನರ ಕೈಗೆ ನೀಡಿದ ಎಂಡಿಎನ್‌: ಪ್ರೊ.ರವಿವರ್ಮ ಕುಮಾರ್‌

ಸಿದ್ದರಾಮಯ್ಯನವರಿಗೂ ಮೊದಲು ಮಾತನಾಡಿದ ಕರ್ನಾಟಕ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್‌ ಅವರು ಪ್ರೊಫೆಸರ್‌ ಎಂಡಿಎನ್‌ ಅವರ ಧೈರ್ಯ ಹಾಗೂ ಪ್ರಭಾವಕ್ಕೆ ಸಂಬಂಧಿಸಿದಂತೆ ಘಟನೆಯೊಂದನ್ನು ಮೆಲುಕುಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೈತ ಸಂಘದ ಪ್ರಾರಂಭದ ದಿನಗಳಲ್ಲಿ ನರಗುಂದ, ನವಲಗುಂದದಲ್ಲಿ ಗೋಲಿಬಾರ್‌ ಆಗಿ ಮೂರು ಜನ ರೈತರನ್ನು ಕೊಲ್ಲಲಾಯಿತು. ಆ ಸನ್ನಿವೇಶದಲ್ಲಿ ಶಿವಮೊಗ್ಗದಲ್ಲಿ ಎಂ.ಡಿ.ಸುಂದರೇಶ್‌, ಕಡಿದಾಳ್ ಶಾಮಣ್ಣ, ಎಚ್‌.ಎಸ್‌.ರುದ್ರಪ್ಪ ನೇತೃತ್ವದಲ್ಲಿ ಪ್ರತಿಭಟನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿತ್ತು. ರೈತರ ದೊಡ್ಡ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಎಲ್ಲ ದರ್ಪ, ದವಲತ್ತು ಪ್ರದರ್ಶಿಸಬಹುದಾಗಿದ್ದ ಒಬ್ಬ ಪೊಲೀಸ್‌ ಅಧಿಕಾರಿ ಕುದುರೆ ಮೇಲೆ ಬಂದ. ಆತನ ಕೈಯಲ್ಲಿ ಒಂದು ಚಾಟಿ ಇರುತ್ತದೆ. ದಾರಿಯುದ್ಧಕ್ಕೂ ಜನರ ಮೇಲೆ ಜಳಪಿಸುತ್ತಿದ್ದ. ಪ್ರೊಫೆಸರ್‌ ನೋಡಿದರು. ಪೊಲೀಸ್ ಸೂಪರಿಡೆಂಟ್, ಡೆಪ್ಯೂಟಿ ಕಮಿಷನರ್‌ ಎಲ್ಲರೂ ಇದ್ದರು. ಆಗ ನಂಜುಂಡಸ್ವಾಮಿಯವರು ಒಂದು ಮಾತು ಹೇಳಿದರು. ಡಿಸಿ ಆದಿಯಾಗಿ ಖಾಕಿ ಧರಿಸಿರುವ ನೀವೆಲ್ಲ ಪ್ರಜಾ ಸೇವಕರು. ಪ್ರಜೆಗಳು ನಿಮ್ಮನ್ನು ನೇಮಕ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಸೇವಕರಂತೆ ನೀವು ನಡೆದುಕೊಳ್ಳಬೇಕು. ಈ ದರ್ಪ, ದೌಲತ್ತು ನಡೆಸುವ ಚಾಳಿಯನ್ನು ಬಿಡಿ. ಯಾರು ಈ ಅಧಿಕಾರಿ, ಇವನ ಕೈಗೆ ಚಾಟಿ ಕೊಟ್ಟಿದ್ದು ಯಾರು? ಡಿಸಿಯವರೇ ನಿಮಗೆ ಐದು ನಿಮಿಷ ಸಮಯ ಕೊಡುತ್ತೇನೆ. ಇನ್ನೈದು ನಿಮಿಷದಲ್ಲಿ ಆ ಅಧಿಕಾರಿ ಕೈಯಿಂದ ಆ ಚಾಟಿಯನ್ನು ಕಿತ್ತುಕೊಳ್ಳದೆ ಹೋದರೆ ಆರನೇ ನಿಮಿಷಕ್ಕೆ ರೈತರು ಆ ಕೆಲಸವನ್ನು ಮಾಡುತ್ತಾರೆ ಎಂದರು. ಈ ಮಾತು ಕೇಳಿದ ತಕ್ಷಣ ರೈತರು ಎದ್ದು ನಿಂತರು. ಆ ಅಧಿಕಾರಿ ಎಲ್ಲಿ ಓಡಿ ಹೋದನೋ ಗೊತ್ತಿಲ್ಲ. ಆ ರೀತಿ ನಂಜುಂಡಸ್ವಾಮಿಯವರು ಸರ್ಕಾರದ ಕೈಯಲ್ಲಿದ್ದ ಚಾಟಿಯನ್ನು ಕಿತ್ತುಕೊಂಡು ರೈತರ ಕೈಗೆ ಕೊಟ್ಟರು” ಎಂದು ಪ್ರೊ.ರವಿವರ್ಮಕುಮಾರ್‌ ತಿಳಿಸಿದರು.

ನಂಜುಂಡಸ್ವಾಮಿಯವರ ಪುತ್ರಿ, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ನಮ್ಮ ತಂದೆಯವರು ದೈಹಿಕವಾಗಿ ನಿರ್ಗಮನವಾಗಿ 18 ವರ್ಷಗಳಾದವು. ರೈತ ಸಂಘ ಕವಲುಗಳಾಗಿದೆ. ಎಂಡಿಎನ್‌ ಅವರ ಭಾವಚಿತ್ರವನ್ನು ಎಲ್ಲರೂ ಬಳಸುತ್ತಾರೆ. ಆದರೆ ಅವರಿಗಿದ್ದ ವೈಚಾರಿಕ ಬದ್ಧತೆ, ಆತ್ಮಸ್ಥೈರ್ಯ, ರಾಜೀ ಇಲ್ಲದೆ ಸತ್ಯಕ್ಕಾಗಿ ನಿಲ್ಲುವ ಗುಣ ಯಾರಲ್ಲಿ ಇದೆ ಎಂದು ಹುಡುಕಾಡುತ್ತಿದ್ದಾಗ ಸಿದ್ದರಾಮಯ್ಯನವರಲ್ಲಿ ಕಂಡೆ” ಎಂದರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಚುಕ್ಕಿ ನಂಜುಂಡಸ್ವಾಮಿಯವರು ಸಿದ್ದರಾಮಯ್ಯನವರಿಗೆ ನೀಡಿದರು. ಬಳಿಕ ಚಾಟಿಯನ್ನು ಬೀಸಿದ ಅವರು, ಹೆಗಲಿಗೆ ಬಾರುಕೋಲನ್ನು ಧರಿಸಿ ಎನ್‌ಡಿಎಂ ಅವರ ಹೋರಾಟವನ್ನು ಮೆಲುಕು ಹಾಕಿದರು.

ಕೃತಿಯ ಸಂಪಾದಕರಾದ ನಟರಾಜ್‌ ಹುಳಿಯಾರ್‌, ರವಿಕುಮಾರ್ ಬಾಗಿ, ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು, ಡಾ.ವೆಂಕಟೇಶ್ ನೆಲ್ಲುಕುಂಟೆ, ಮುಖಂಡರಾದ ರಾಠೋಡ್‌, ನಾಗರಾಜ್‌ ರೆಡ್ಡಿ ಹಾಗೂ ಇತರ ಮುಖಂಡರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...