Homeಕರ್ನಾಟಕಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ಇಂದು ಬಿಡುಗಡೆ ಮಾಡಲಾಯಿತು.

- Advertisement -
- Advertisement -

“ರೈತ ಬಳಸುವ ಬಾರುಕೋಲನ್ನು ತನ್ನ ರೂಲ್‌ ಆಫ್‌ ಲಾ ಎಂದವರು ಪ್ರೊ.ನಂಜುಂಡಸ್ವಾಮಿ” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಪ್ರೊ.ಎನ್‌ಡಿಎಂ ಅವರಿಗೆ ಜಗತ್ತಿನ ಎಲ್ಲ ಸಮಸ್ಯೆಗಳೂ ಗೊತ್ತಿದ್ದವು. ಬಹಳ ಓದಿಕೊಂಡಿದ್ದರು. ಅವರ ಒಂದು ಸ್ವಭಾವ ಏನೆಂದರೆ ಬೇರೆಯವರ ಅಭಿಪ್ರಾಯಕ್ಕೆ ಅಷ್ಟಾಗಿ ಬೆಲೆ ಕೊಡುತ್ತಿರಲಿಲ್ಲ. ಅವರು ಹೇಳಿದ್ದೇ ಸರಿ ಅಂತ ಒಪ್ಪಿಕೊಳ್ಳಬೇಕಿತ್ತು. ಒಪ್ಪಿಕೊಳ್ಳದಿದ್ದರೆ ತೋರು ಬೆರಳು ತೋರಿಸಿ- ನಿನಗೆ ಗೊತ್ತಿಲ್ಲ, ನೀನು ಓದಿಕೊಂಡಿಲ್ಲ ಕುಳಿತುಕೋ ಎನ್ನುತ್ತಿದ್ದರು” ಎಂದು ಪ್ರೊಫೆಸರ್‌ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾನು ರಾಜಕಾರಣಕ್ಕೆ ಬರಲು ಕಾರಣರಾದವರು ಪ್ರೊ.ಎಂಡಿಎನ್‌. ಅವರೊಂದಿಗೆ ರಾಜಕೀಯ ಚರ್ಚೆಗಳನ್ನು ನಡೆಸುತ್ತಿದ್ದೆವು. ರಾಮಮನೋಹರ್‌ ಲೋಹಿಯಾ ಅವರು ಹೊರತರುತ್ತಿದ್ದ ‘ಮ್ಯಾನ್‌ಕೈಂಡ್‌’ ವಾರ ಪತ್ರಿಕೆಯನ್ನು ಕನ್ನಡದಲ್ಲಿ ‘ಮಾನವ’ ಎಂದು ಪ್ರಕಟಿಸಲಾಗುತ್ತಿತ್ತು. ಆಂದೋಲನ ಪತ್ರಿಕೆಯ ಸಂಸ್ಥಾಪಕರಾದ ರಾಜಶೇಖರ್‌ ಕೋಟಿಯವರು ಮೈಸೂರು ಕೆ.ಆರ್‌.ಸರ್ಕಲ್‌ನಲ್ಲಿ ಮಾನವ ಪತ್ರಿಕೆಯನ್ನು ಮಾರುತ್ತಿದ್ದರು. ನಂತರ ನಂಜುಂಡಸ್ವಾಮಿಯವರು ಬೆಂಗಳೂರಿಗೆ ಬಂದರು ಎಂದು ತಿಳಿಸಿದರು.

ಪ್ರೊ.ನಂಜುಂಡಸ್ವಾಮಿಯವರ ಪರಿಚಯವಾದದ್ದು 1969ನೇ ಇಸವಿಯಲ್ಲಿ. ನಂಜುಂಡಸ್ವಾಮಿಯವರು ಶಾರದಾ ವಿಲಾಸ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಅವರು ನಮಗೆ ತರಗತಿಯಲ್ಲಿ ಪಾಠ ಮಾಡಿದ ಗುರುಗಳಾಗಿರಲಿಲ್ಲ. ರಾಜಕೀಯ ಗುರುಗಳಾಗಿದ್ದರು. ನಾನು, ಬಸವರಾಜು, ನರೇಂದ್ರ, ಲಿಂಗಪ್ಪ, ಅಣ್ಣೇಗೌಡ ಯಾವಾಗಲೂ ಎಂಡಿಎನ್‌ ಜೊತೆ ಇರುತ್ತಿದ್ದೆವು. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದ್ದ ಸ್ಟುಡೆಂಟ್ ಯೂನಿಯನ್‌ ಚುನಾವಣೆಯನ್ನು ಪ್ರಶ್ನಿಸುವಂತೆ ಎಂಡಿಎನ್‌ ನಮಗೆ ಸೂಚಿಸಿದ್ದರು. ನಮ್ಮ ಆಗ್ರಹಕ್ಕೆ ಮಣಿದು ಒಂದು ವರ್ಷದ ನಂತರ ಬದಲಾವಣೆ ತರಲಾಯಿತು ಎಂದು ನೆನಪಿಸಿಕೊಂಡರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಸಿದ್ದರಾಮಯ್ಯನವರು ಧರಿಸಿದ್ದು ಹೀಗೆ…

ತರಗತಿ ಮುಗಿದ ಮೇಲೆ ನಂಜುಂಡಸ್ವಾಮಿ ಅವರ ಜೊತೆಯಲ್ಲಿ ಕ್ಯಾಂಟೀನ್‌ಗೆ ಹೋಗುತ್ತಿದ್ದೆವು. ನಮಗೆ ಚಾರ್‌ಮಿನಾರ್‌ ಸಿಗರೇಟ್ ಹಾಗೂ ಅರ್ಧ ಗಂಟೆಗೊಮ್ಮೆ ಟೀ ಕೊಡಿಸುತ್ತಿದ್ದರು. ಚರ್ಚಿಸುತ್ತಿದ್ದರು. ಅಲ್ಲಿಯವರೆಗೆ ರಾಜಕಾರಣದ ಗಂಧಗಾಳಿ ಗೊತ್ತಿರಲಿಲ್ಲ. ನಾನು ರಾಜಕೀಯಕ್ಕೆ ಬರಲು ಎನ್‌ಡಿಎಂ ಕಾರಣಕರ್ತರು. ನಂತರ ಸಮಾಜವಾದಿ ಯುವಜನ ಸಭಾ ಸೇರಿದೆ. ಅಲ್ಲಿಂದ ರಾಜಕೀಯ ಶುರುವಾಯಿತು ಎಂದು ಹೇಳಿದರು.

ರೈತ ಚಳವಳಿಯ ಬಹಳ ಎತ್ತರಕ್ಕೆ ಹೋಗಿತ್ತು. ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಎರಡು ವರ್ಷ ಸಕ್ರಿಯವಾಗಿ ರೈತ ಸಂಘದಲ್ಲಿ ಇದ್ದೆ. ಈ ಧೈರ್ಯಕ್ಕೆ, ಅಧಿಕಾರಿಗಳ ವಿರುದ್ಧ ಮಾತನಾಡಲಿಕ್ಕೆ ಪ್ರೊಫೆಸರ್‌ ಕಾರಣ. ಸರ್ಕಾರಿ ವಾಹನಗಳನ್ನು ವೈಯಕ್ತಿಕ ಕೆಲಸಗಳಿಗೆ ಅಧಿಕಾರಿಗಳು ಬಳಸಿದರೆ ಚೆಕ್‌ ಮಾಡಲು ನಮಗೆ ಪ್ರೊಫೆಸರ್‌ ತಿಳಿಸಿದ್ದರು. ನಾವು ತಾಲ್ಲೂಕು ಕಚೇರಿಗೆ ಹೋದರೆ ಎಲ್ಲ ಅಧಿಕಾರಿಗಳು ಅಲರ್ಟ್ ಆಗುತ್ತಿದ್ದರು. ಅಧಿಕಾರಿಗಳು ಲಂಚ ತೆಗೆದುಕೊಳ್ಳಲು ಹೆದರುತ್ತಿದ್ದರು. ಅದಕ್ಕೆ ನಂಜುಂಡಸ್ವಾಮಿಯವರು ಕಾರಣ ಎಂದು ಶ್ಲಾಘಿಸಿದರು.

ರೈತ ಸಂಘವು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಆಗ್ರಹಿಸಿದೆವು. ಎನ್‌.ಡಿ.ಸುಂದರೇಶ್‌, ಕಡಿದಾಳು ಶಾಮಣ್ಣ ವಿರೋಧಿಸಿದರು. ನಾವು ಚುನಾವಣೆಗೆ ನಿಲ್ಲಬೇಕೆಂದು ಆಗ್ರಹಿಸಿ ವಾಕ್‌ಔಟ್ ಮಾಡಿದೆವು. ಅದಾದ ಮೇಲೆ ಸಂಪರ್ಕ ಕಡಿಮೆಯಾಯಿತು ಎಂದು ವಿಷಾದಿಸಿದರು.

ರೈತರೊಂದಿಗೆ ಅಂದಿನ ಮುಖ್ಯಮಂತ್ರಿ ಗುಂಡೂರಾಯರು ಒಂದು ಸಭೆ ಏರ್ಪಾಡು ಮಾಡಿದ್ದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನು ಉದ್ದೇಶಿಸಿ ಪ್ರೊಫೆಸರ್‌, ಆ ದೊಡ್ಡ ಕೂಲಿ ಇದ್ದಾನಲ್ಲ, ಆತ ಎದ್ದು ಹೋದರೆ ಮಾತ್ರ ನಾನು ಮಾತನಾಡೋದು ಎಂದು ಮುಖ್ಯಮಂತ್ರಿಗೆ ತಿಳಿಸಿದ್ದರು.  ಅಷ್ಟು ಧೈರ್ಯ ಅವರಿಗಿತ್ತು ಎಂದು ಸ್ಮರಿಸಿದರು.

ಪ್ರಜಾಪ್ರಭುತ್ವ, ಸಮಾಜವಾದ, ಸಂವಿಧಾನ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅವರದ್ದೇ ಆದ ಚಿಂತನೆಗಳಿದ್ದವು. ಅವರ ಎಲ್ಲ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆಗದಿದ್ದರೂ ಕೆಲವೊಂದು ವಿಚಾರಗಳನ್ನು ಮೈಗೂಡಿಸಿಕೊಂಡಿದ್ದೇವೆ. ಇಂದಿಗೂ ನಂಜುಂಡಸ್ವಾಮಿಯವರ ಚಿಂತನೆಗಳು ಬಹಳ ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಕೈಯಲಿದ್ದ ಚಾಟಿಯನ್ನು ಜನರ ಕೈಗೆ ನೀಡಿದ ಎಂಡಿಎನ್‌: ಪ್ರೊ.ರವಿವರ್ಮ ಕುಮಾರ್‌

ಸಿದ್ದರಾಮಯ್ಯನವರಿಗೂ ಮೊದಲು ಮಾತನಾಡಿದ ಕರ್ನಾಟಕ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್‌ ಅವರು ಪ್ರೊಫೆಸರ್‌ ಎಂಡಿಎನ್‌ ಅವರ ಧೈರ್ಯ ಹಾಗೂ ಪ್ರಭಾವಕ್ಕೆ ಸಂಬಂಧಿಸಿದಂತೆ ಘಟನೆಯೊಂದನ್ನು ಮೆಲುಕುಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೈತ ಸಂಘದ ಪ್ರಾರಂಭದ ದಿನಗಳಲ್ಲಿ ನರಗುಂದ, ನವಲಗುಂದದಲ್ಲಿ ಗೋಲಿಬಾರ್‌ ಆಗಿ ಮೂರು ಜನ ರೈತರನ್ನು ಕೊಲ್ಲಲಾಯಿತು. ಆ ಸನ್ನಿವೇಶದಲ್ಲಿ ಶಿವಮೊಗ್ಗದಲ್ಲಿ ಎಂ.ಡಿ.ಸುಂದರೇಶ್‌, ಕಡಿದಾಳ್ ಶಾಮಣ್ಣ, ಎಚ್‌.ಎಸ್‌.ರುದ್ರಪ್ಪ ನೇತೃತ್ವದಲ್ಲಿ ಪ್ರತಿಭಟನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿತ್ತು. ರೈತರ ದೊಡ್ಡ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಎಲ್ಲ ದರ್ಪ, ದವಲತ್ತು ಪ್ರದರ್ಶಿಸಬಹುದಾಗಿದ್ದ ಒಬ್ಬ ಪೊಲೀಸ್‌ ಅಧಿಕಾರಿ ಕುದುರೆ ಮೇಲೆ ಬಂದ. ಆತನ ಕೈಯಲ್ಲಿ ಒಂದು ಚಾಟಿ ಇರುತ್ತದೆ. ದಾರಿಯುದ್ಧಕ್ಕೂ ಜನರ ಮೇಲೆ ಜಳಪಿಸುತ್ತಿದ್ದ. ಪ್ರೊಫೆಸರ್‌ ನೋಡಿದರು. ಪೊಲೀಸ್ ಸೂಪರಿಡೆಂಟ್, ಡೆಪ್ಯೂಟಿ ಕಮಿಷನರ್‌ ಎಲ್ಲರೂ ಇದ್ದರು. ಆಗ ನಂಜುಂಡಸ್ವಾಮಿಯವರು ಒಂದು ಮಾತು ಹೇಳಿದರು. ಡಿಸಿ ಆದಿಯಾಗಿ ಖಾಕಿ ಧರಿಸಿರುವ ನೀವೆಲ್ಲ ಪ್ರಜಾ ಸೇವಕರು. ಪ್ರಜೆಗಳು ನಿಮ್ಮನ್ನು ನೇಮಕ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಸೇವಕರಂತೆ ನೀವು ನಡೆದುಕೊಳ್ಳಬೇಕು. ಈ ದರ್ಪ, ದೌಲತ್ತು ನಡೆಸುವ ಚಾಳಿಯನ್ನು ಬಿಡಿ. ಯಾರು ಈ ಅಧಿಕಾರಿ, ಇವನ ಕೈಗೆ ಚಾಟಿ ಕೊಟ್ಟಿದ್ದು ಯಾರು? ಡಿಸಿಯವರೇ ನಿಮಗೆ ಐದು ನಿಮಿಷ ಸಮಯ ಕೊಡುತ್ತೇನೆ. ಇನ್ನೈದು ನಿಮಿಷದಲ್ಲಿ ಆ ಅಧಿಕಾರಿ ಕೈಯಿಂದ ಆ ಚಾಟಿಯನ್ನು ಕಿತ್ತುಕೊಳ್ಳದೆ ಹೋದರೆ ಆರನೇ ನಿಮಿಷಕ್ಕೆ ರೈತರು ಆ ಕೆಲಸವನ್ನು ಮಾಡುತ್ತಾರೆ ಎಂದರು. ಈ ಮಾತು ಕೇಳಿದ ತಕ್ಷಣ ರೈತರು ಎದ್ದು ನಿಂತರು. ಆ ಅಧಿಕಾರಿ ಎಲ್ಲಿ ಓಡಿ ಹೋದನೋ ಗೊತ್ತಿಲ್ಲ. ಆ ರೀತಿ ನಂಜುಂಡಸ್ವಾಮಿಯವರು ಸರ್ಕಾರದ ಕೈಯಲ್ಲಿದ್ದ ಚಾಟಿಯನ್ನು ಕಿತ್ತುಕೊಂಡು ರೈತರ ಕೈಗೆ ಕೊಟ್ಟರು” ಎಂದು ಪ್ರೊ.ರವಿವರ್ಮಕುಮಾರ್‌ ತಿಳಿಸಿದರು.

ನಂಜುಂಡಸ್ವಾಮಿಯವರ ಪುತ್ರಿ, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ನಮ್ಮ ತಂದೆಯವರು ದೈಹಿಕವಾಗಿ ನಿರ್ಗಮನವಾಗಿ 18 ವರ್ಷಗಳಾದವು. ರೈತ ಸಂಘ ಕವಲುಗಳಾಗಿದೆ. ಎಂಡಿಎನ್‌ ಅವರ ಭಾವಚಿತ್ರವನ್ನು ಎಲ್ಲರೂ ಬಳಸುತ್ತಾರೆ. ಆದರೆ ಅವರಿಗಿದ್ದ ವೈಚಾರಿಕ ಬದ್ಧತೆ, ಆತ್ಮಸ್ಥೈರ್ಯ, ರಾಜೀ ಇಲ್ಲದೆ ಸತ್ಯಕ್ಕಾಗಿ ನಿಲ್ಲುವ ಗುಣ ಯಾರಲ್ಲಿ ಇದೆ ಎಂದು ಹುಡುಕಾಡುತ್ತಿದ್ದಾಗ ಸಿದ್ದರಾಮಯ್ಯನವರಲ್ಲಿ ಕಂಡೆ” ಎಂದರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಚುಕ್ಕಿ ನಂಜುಂಡಸ್ವಾಮಿಯವರು ಸಿದ್ದರಾಮಯ್ಯನವರಿಗೆ ನೀಡಿದರು. ಬಳಿಕ ಚಾಟಿಯನ್ನು ಬೀಸಿದ ಅವರು, ಹೆಗಲಿಗೆ ಬಾರುಕೋಲನ್ನು ಧರಿಸಿ ಎನ್‌ಡಿಎಂ ಅವರ ಹೋರಾಟವನ್ನು ಮೆಲುಕು ಹಾಕಿದರು.

ಕೃತಿಯ ಸಂಪಾದಕರಾದ ನಟರಾಜ್‌ ಹುಳಿಯಾರ್‌, ರವಿಕುಮಾರ್ ಬಾಗಿ, ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು, ಡಾ.ವೆಂಕಟೇಶ್ ನೆಲ್ಲುಕುಂಟೆ, ಮುಖಂಡರಾದ ರಾಠೋಡ್‌, ನಾಗರಾಜ್‌ ರೆಡ್ಡಿ ಹಾಗೂ ಇತರ ಮುಖಂಡರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....