Homeಕರ್ನಾಟಕಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ಬಾರುಕೋಲ್‌ ನನ್ನ ರೂಲ್‌ ಆಫ್ ಲಾ ಎಂದವರು ಪ್ರೊ.ಎಂಡಿಎನ್‌: ಸಿದ್ದರಾಮಯ್ಯ

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ಇಂದು ಬಿಡುಗಡೆ ಮಾಡಲಾಯಿತು.

- Advertisement -
- Advertisement -

“ರೈತ ಬಳಸುವ ಬಾರುಕೋಲನ್ನು ತನ್ನ ರೂಲ್‌ ಆಫ್‌ ಲಾ ಎಂದವರು ಪ್ರೊ.ನಂಜುಂಡಸ್ವಾಮಿ” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಟರಾಜ್‌ ಹುಳಿಯಾರ್‌‌, ರವಿಕುಮಾರ್‌ ಭಾಗಿಯವರು ಸಂಪಾದಿಸಿರುವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಚಿಂತನೆಗಳ ‘ಬಾರುಕೋಲು’ ಕೃತಿಯನ್ನು ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಪ್ರೊ.ಎನ್‌ಡಿಎಂ ಅವರಿಗೆ ಜಗತ್ತಿನ ಎಲ್ಲ ಸಮಸ್ಯೆಗಳೂ ಗೊತ್ತಿದ್ದವು. ಬಹಳ ಓದಿಕೊಂಡಿದ್ದರು. ಅವರ ಒಂದು ಸ್ವಭಾವ ಏನೆಂದರೆ ಬೇರೆಯವರ ಅಭಿಪ್ರಾಯಕ್ಕೆ ಅಷ್ಟಾಗಿ ಬೆಲೆ ಕೊಡುತ್ತಿರಲಿಲ್ಲ. ಅವರು ಹೇಳಿದ್ದೇ ಸರಿ ಅಂತ ಒಪ್ಪಿಕೊಳ್ಳಬೇಕಿತ್ತು. ಒಪ್ಪಿಕೊಳ್ಳದಿದ್ದರೆ ತೋರು ಬೆರಳು ತೋರಿಸಿ- ನಿನಗೆ ಗೊತ್ತಿಲ್ಲ, ನೀನು ಓದಿಕೊಂಡಿಲ್ಲ ಕುಳಿತುಕೋ ಎನ್ನುತ್ತಿದ್ದರು” ಎಂದು ಪ್ರೊಫೆಸರ್‌ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾನು ರಾಜಕಾರಣಕ್ಕೆ ಬರಲು ಕಾರಣರಾದವರು ಪ್ರೊ.ಎಂಡಿಎನ್‌. ಅವರೊಂದಿಗೆ ರಾಜಕೀಯ ಚರ್ಚೆಗಳನ್ನು ನಡೆಸುತ್ತಿದ್ದೆವು. ರಾಮಮನೋಹರ್‌ ಲೋಹಿಯಾ ಅವರು ಹೊರತರುತ್ತಿದ್ದ ‘ಮ್ಯಾನ್‌ಕೈಂಡ್‌’ ವಾರ ಪತ್ರಿಕೆಯನ್ನು ಕನ್ನಡದಲ್ಲಿ ‘ಮಾನವ’ ಎಂದು ಪ್ರಕಟಿಸಲಾಗುತ್ತಿತ್ತು. ಆಂದೋಲನ ಪತ್ರಿಕೆಯ ಸಂಸ್ಥಾಪಕರಾದ ರಾಜಶೇಖರ್‌ ಕೋಟಿಯವರು ಮೈಸೂರು ಕೆ.ಆರ್‌.ಸರ್ಕಲ್‌ನಲ್ಲಿ ಮಾನವ ಪತ್ರಿಕೆಯನ್ನು ಮಾರುತ್ತಿದ್ದರು. ನಂತರ ನಂಜುಂಡಸ್ವಾಮಿಯವರು ಬೆಂಗಳೂರಿಗೆ ಬಂದರು ಎಂದು ತಿಳಿಸಿದರು.

ಪ್ರೊ.ನಂಜುಂಡಸ್ವಾಮಿಯವರ ಪರಿಚಯವಾದದ್ದು 1969ನೇ ಇಸವಿಯಲ್ಲಿ. ನಂಜುಂಡಸ್ವಾಮಿಯವರು ಶಾರದಾ ವಿಲಾಸ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಅವರು ನಮಗೆ ತರಗತಿಯಲ್ಲಿ ಪಾಠ ಮಾಡಿದ ಗುರುಗಳಾಗಿರಲಿಲ್ಲ. ರಾಜಕೀಯ ಗುರುಗಳಾಗಿದ್ದರು. ನಾನು, ಬಸವರಾಜು, ನರೇಂದ್ರ, ಲಿಂಗಪ್ಪ, ಅಣ್ಣೇಗೌಡ ಯಾವಾಗಲೂ ಎಂಡಿಎನ್‌ ಜೊತೆ ಇರುತ್ತಿದ್ದೆವು. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದ್ದ ಸ್ಟುಡೆಂಟ್ ಯೂನಿಯನ್‌ ಚುನಾವಣೆಯನ್ನು ಪ್ರಶ್ನಿಸುವಂತೆ ಎಂಡಿಎನ್‌ ನಮಗೆ ಸೂಚಿಸಿದ್ದರು. ನಮ್ಮ ಆಗ್ರಹಕ್ಕೆ ಮಣಿದು ಒಂದು ವರ್ಷದ ನಂತರ ಬದಲಾವಣೆ ತರಲಾಯಿತು ಎಂದು ನೆನಪಿಸಿಕೊಂಡರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಸಿದ್ದರಾಮಯ್ಯನವರು ಧರಿಸಿದ್ದು ಹೀಗೆ…

ತರಗತಿ ಮುಗಿದ ಮೇಲೆ ನಂಜುಂಡಸ್ವಾಮಿ ಅವರ ಜೊತೆಯಲ್ಲಿ ಕ್ಯಾಂಟೀನ್‌ಗೆ ಹೋಗುತ್ತಿದ್ದೆವು. ನಮಗೆ ಚಾರ್‌ಮಿನಾರ್‌ ಸಿಗರೇಟ್ ಹಾಗೂ ಅರ್ಧ ಗಂಟೆಗೊಮ್ಮೆ ಟೀ ಕೊಡಿಸುತ್ತಿದ್ದರು. ಚರ್ಚಿಸುತ್ತಿದ್ದರು. ಅಲ್ಲಿಯವರೆಗೆ ರಾಜಕಾರಣದ ಗಂಧಗಾಳಿ ಗೊತ್ತಿರಲಿಲ್ಲ. ನಾನು ರಾಜಕೀಯಕ್ಕೆ ಬರಲು ಎನ್‌ಡಿಎಂ ಕಾರಣಕರ್ತರು. ನಂತರ ಸಮಾಜವಾದಿ ಯುವಜನ ಸಭಾ ಸೇರಿದೆ. ಅಲ್ಲಿಂದ ರಾಜಕೀಯ ಶುರುವಾಯಿತು ಎಂದು ಹೇಳಿದರು.

ರೈತ ಚಳವಳಿಯ ಬಹಳ ಎತ್ತರಕ್ಕೆ ಹೋಗಿತ್ತು. ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಎರಡು ವರ್ಷ ಸಕ್ರಿಯವಾಗಿ ರೈತ ಸಂಘದಲ್ಲಿ ಇದ್ದೆ. ಈ ಧೈರ್ಯಕ್ಕೆ, ಅಧಿಕಾರಿಗಳ ವಿರುದ್ಧ ಮಾತನಾಡಲಿಕ್ಕೆ ಪ್ರೊಫೆಸರ್‌ ಕಾರಣ. ಸರ್ಕಾರಿ ವಾಹನಗಳನ್ನು ವೈಯಕ್ತಿಕ ಕೆಲಸಗಳಿಗೆ ಅಧಿಕಾರಿಗಳು ಬಳಸಿದರೆ ಚೆಕ್‌ ಮಾಡಲು ನಮಗೆ ಪ್ರೊಫೆಸರ್‌ ತಿಳಿಸಿದ್ದರು. ನಾವು ತಾಲ್ಲೂಕು ಕಚೇರಿಗೆ ಹೋದರೆ ಎಲ್ಲ ಅಧಿಕಾರಿಗಳು ಅಲರ್ಟ್ ಆಗುತ್ತಿದ್ದರು. ಅಧಿಕಾರಿಗಳು ಲಂಚ ತೆಗೆದುಕೊಳ್ಳಲು ಹೆದರುತ್ತಿದ್ದರು. ಅದಕ್ಕೆ ನಂಜುಂಡಸ್ವಾಮಿಯವರು ಕಾರಣ ಎಂದು ಶ್ಲಾಘಿಸಿದರು.

ರೈತ ಸಂಘವು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಆಗ್ರಹಿಸಿದೆವು. ಎನ್‌.ಡಿ.ಸುಂದರೇಶ್‌, ಕಡಿದಾಳು ಶಾಮಣ್ಣ ವಿರೋಧಿಸಿದರು. ನಾವು ಚುನಾವಣೆಗೆ ನಿಲ್ಲಬೇಕೆಂದು ಆಗ್ರಹಿಸಿ ವಾಕ್‌ಔಟ್ ಮಾಡಿದೆವು. ಅದಾದ ಮೇಲೆ ಸಂಪರ್ಕ ಕಡಿಮೆಯಾಯಿತು ಎಂದು ವಿಷಾದಿಸಿದರು.

ರೈತರೊಂದಿಗೆ ಅಂದಿನ ಮುಖ್ಯಮಂತ್ರಿ ಗುಂಡೂರಾಯರು ಒಂದು ಸಭೆ ಏರ್ಪಾಡು ಮಾಡಿದ್ದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನು ಉದ್ದೇಶಿಸಿ ಪ್ರೊಫೆಸರ್‌, ಆ ದೊಡ್ಡ ಕೂಲಿ ಇದ್ದಾನಲ್ಲ, ಆತ ಎದ್ದು ಹೋದರೆ ಮಾತ್ರ ನಾನು ಮಾತನಾಡೋದು ಎಂದು ಮುಖ್ಯಮಂತ್ರಿಗೆ ತಿಳಿಸಿದ್ದರು.  ಅಷ್ಟು ಧೈರ್ಯ ಅವರಿಗಿತ್ತು ಎಂದು ಸ್ಮರಿಸಿದರು.

ಪ್ರಜಾಪ್ರಭುತ್ವ, ಸಮಾಜವಾದ, ಸಂವಿಧಾನ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅವರದ್ದೇ ಆದ ಚಿಂತನೆಗಳಿದ್ದವು. ಅವರ ಎಲ್ಲ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆಗದಿದ್ದರೂ ಕೆಲವೊಂದು ವಿಚಾರಗಳನ್ನು ಮೈಗೂಡಿಸಿಕೊಂಡಿದ್ದೇವೆ. ಇಂದಿಗೂ ನಂಜುಂಡಸ್ವಾಮಿಯವರ ಚಿಂತನೆಗಳು ಬಹಳ ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಕೈಯಲಿದ್ದ ಚಾಟಿಯನ್ನು ಜನರ ಕೈಗೆ ನೀಡಿದ ಎಂಡಿಎನ್‌: ಪ್ರೊ.ರವಿವರ್ಮ ಕುಮಾರ್‌

ಸಿದ್ದರಾಮಯ್ಯನವರಿಗೂ ಮೊದಲು ಮಾತನಾಡಿದ ಕರ್ನಾಟಕ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್‌ ಅವರು ಪ್ರೊಫೆಸರ್‌ ಎಂಡಿಎನ್‌ ಅವರ ಧೈರ್ಯ ಹಾಗೂ ಪ್ರಭಾವಕ್ಕೆ ಸಂಬಂಧಿಸಿದಂತೆ ಘಟನೆಯೊಂದನ್ನು ಮೆಲುಕುಹಾಕಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೈತ ಸಂಘದ ಪ್ರಾರಂಭದ ದಿನಗಳಲ್ಲಿ ನರಗುಂದ, ನವಲಗುಂದದಲ್ಲಿ ಗೋಲಿಬಾರ್‌ ಆಗಿ ಮೂರು ಜನ ರೈತರನ್ನು ಕೊಲ್ಲಲಾಯಿತು. ಆ ಸನ್ನಿವೇಶದಲ್ಲಿ ಶಿವಮೊಗ್ಗದಲ್ಲಿ ಎಂ.ಡಿ.ಸುಂದರೇಶ್‌, ಕಡಿದಾಳ್ ಶಾಮಣ್ಣ, ಎಚ್‌.ಎಸ್‌.ರುದ್ರಪ್ಪ ನೇತೃತ್ವದಲ್ಲಿ ಪ್ರತಿಭಟನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿತ್ತು. ರೈತರ ದೊಡ್ಡ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಎಲ್ಲ ದರ್ಪ, ದವಲತ್ತು ಪ್ರದರ್ಶಿಸಬಹುದಾಗಿದ್ದ ಒಬ್ಬ ಪೊಲೀಸ್‌ ಅಧಿಕಾರಿ ಕುದುರೆ ಮೇಲೆ ಬಂದ. ಆತನ ಕೈಯಲ್ಲಿ ಒಂದು ಚಾಟಿ ಇರುತ್ತದೆ. ದಾರಿಯುದ್ಧಕ್ಕೂ ಜನರ ಮೇಲೆ ಜಳಪಿಸುತ್ತಿದ್ದ. ಪ್ರೊಫೆಸರ್‌ ನೋಡಿದರು. ಪೊಲೀಸ್ ಸೂಪರಿಡೆಂಟ್, ಡೆಪ್ಯೂಟಿ ಕಮಿಷನರ್‌ ಎಲ್ಲರೂ ಇದ್ದರು. ಆಗ ನಂಜುಂಡಸ್ವಾಮಿಯವರು ಒಂದು ಮಾತು ಹೇಳಿದರು. ಡಿಸಿ ಆದಿಯಾಗಿ ಖಾಕಿ ಧರಿಸಿರುವ ನೀವೆಲ್ಲ ಪ್ರಜಾ ಸೇವಕರು. ಪ್ರಜೆಗಳು ನಿಮ್ಮನ್ನು ನೇಮಕ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಸೇವಕರಂತೆ ನೀವು ನಡೆದುಕೊಳ್ಳಬೇಕು. ಈ ದರ್ಪ, ದೌಲತ್ತು ನಡೆಸುವ ಚಾಳಿಯನ್ನು ಬಿಡಿ. ಯಾರು ಈ ಅಧಿಕಾರಿ, ಇವನ ಕೈಗೆ ಚಾಟಿ ಕೊಟ್ಟಿದ್ದು ಯಾರು? ಡಿಸಿಯವರೇ ನಿಮಗೆ ಐದು ನಿಮಿಷ ಸಮಯ ಕೊಡುತ್ತೇನೆ. ಇನ್ನೈದು ನಿಮಿಷದಲ್ಲಿ ಆ ಅಧಿಕಾರಿ ಕೈಯಿಂದ ಆ ಚಾಟಿಯನ್ನು ಕಿತ್ತುಕೊಳ್ಳದೆ ಹೋದರೆ ಆರನೇ ನಿಮಿಷಕ್ಕೆ ರೈತರು ಆ ಕೆಲಸವನ್ನು ಮಾಡುತ್ತಾರೆ ಎಂದರು. ಈ ಮಾತು ಕೇಳಿದ ತಕ್ಷಣ ರೈತರು ಎದ್ದು ನಿಂತರು. ಆ ಅಧಿಕಾರಿ ಎಲ್ಲಿ ಓಡಿ ಹೋದನೋ ಗೊತ್ತಿಲ್ಲ. ಆ ರೀತಿ ನಂಜುಂಡಸ್ವಾಮಿಯವರು ಸರ್ಕಾರದ ಕೈಯಲ್ಲಿದ್ದ ಚಾಟಿಯನ್ನು ಕಿತ್ತುಕೊಂಡು ರೈತರ ಕೈಗೆ ಕೊಟ್ಟರು” ಎಂದು ಪ್ರೊ.ರವಿವರ್ಮಕುಮಾರ್‌ ತಿಳಿಸಿದರು.

ನಂಜುಂಡಸ್ವಾಮಿಯವರ ಪುತ್ರಿ, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ನಮ್ಮ ತಂದೆಯವರು ದೈಹಿಕವಾಗಿ ನಿರ್ಗಮನವಾಗಿ 18 ವರ್ಷಗಳಾದವು. ರೈತ ಸಂಘ ಕವಲುಗಳಾಗಿದೆ. ಎಂಡಿಎನ್‌ ಅವರ ಭಾವಚಿತ್ರವನ್ನು ಎಲ್ಲರೂ ಬಳಸುತ್ತಾರೆ. ಆದರೆ ಅವರಿಗಿದ್ದ ವೈಚಾರಿಕ ಬದ್ಧತೆ, ಆತ್ಮಸ್ಥೈರ್ಯ, ರಾಜೀ ಇಲ್ಲದೆ ಸತ್ಯಕ್ಕಾಗಿ ನಿಲ್ಲುವ ಗುಣ ಯಾರಲ್ಲಿ ಇದೆ ಎಂದು ಹುಡುಕಾಡುತ್ತಿದ್ದಾಗ ಸಿದ್ದರಾಮಯ್ಯನವರಲ್ಲಿ ಕಂಡೆ” ಎಂದರು.

ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನು ಚುಕ್ಕಿ ನಂಜುಂಡಸ್ವಾಮಿಯವರು ಸಿದ್ದರಾಮಯ್ಯನವರಿಗೆ ನೀಡಿದರು. ಬಳಿಕ ಚಾಟಿಯನ್ನು ಬೀಸಿದ ಅವರು, ಹೆಗಲಿಗೆ ಬಾರುಕೋಲನ್ನು ಧರಿಸಿ ಎನ್‌ಡಿಎಂ ಅವರ ಹೋರಾಟವನ್ನು ಮೆಲುಕು ಹಾಕಿದರು.

ಕೃತಿಯ ಸಂಪಾದಕರಾದ ನಟರಾಜ್‌ ಹುಳಿಯಾರ್‌, ರವಿಕುಮಾರ್ ಬಾಗಿ, ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು, ಡಾ.ವೆಂಕಟೇಶ್ ನೆಲ್ಲುಕುಂಟೆ, ಮುಖಂಡರಾದ ರಾಠೋಡ್‌, ನಾಗರಾಜ್‌ ರೆಡ್ಡಿ ಹಾಗೂ ಇತರ ಮುಖಂಡರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...