Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...