Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...