Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...