Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...