Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...