Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...