Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...