Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....