Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...