Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...