Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...