Homeಮುಖಪುಟನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ, ಬದಲಿಗೆ ಮಾನವೀಯ ಧರ್ಮದ ಹೊಸ ಯುಗದ ತತ್ವಶಾಸ್ತ್ರವನ್ನು ಸ್ಥಾಪಿಸಲು ಅದರಿಂದ ಹೊರಬಂದರು ಎಂದು ಒತ್ತಿ ಹೇಳಿದರು.

ಗುರುವಿನ ಬೋಧನೆಗಳನ್ನು ಸಾಮಾನ್ಯವಾಗಿ ‘ವರ್ಣಾಶ್ರಮ ಧರ್ಮ’ ಎಂದು ಕರೆಯಲ್ಪಡುವ ಸನಾತನ ಧರ್ಮದ ಜಾತಿ-ಆಧಾರಿತ ಸಾಮಾಜಿಕ ಕ್ರಮದೊಂದಿಗೆ ಸಂಯೋಜಿಸುವ ಪ್ರಯತ್ನಗಳನ್ನು ವಿಜಯನ್ ಟೀಕಿಸಿದರು. “ಇದನ್ನು ಗುರು ದೀರ್ಘಕಾಲ ವಿರೋಧಿಸಿದ್ದರು, ‘ಸನಾತನ ಧರ್ಮವು ಚಾತುರ್ವರ್ಣ್ಯಂ ಅನ್ನು ಆಧರಿಸಿದೆ, ಅದು ಒಬ್ಬರ ಜಾತಿಯ ಆಧಾರದ ಮೇಲೆ ಉದ್ಯೋಗಗಳನ್ನು ಎತ್ತಿಹಿಡಿಯುತ್ತದೆ. ಆದರೆ, ಗುರುಗಳು ಅಂತಹ ಕಲ್ಪನೆಗಳನ್ನು ಧಿಕ್ಕರಿಸಲು ಪ್ರತಿಪಾದಿಸಿದರು, ಧರ್ಮದ ಆಧಾರದ ಮೇಲೆ ಕೆಲಸಗಳನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು. ಗುರುಗಳ ತತ್ವವು ಜಾತಿ ಆಧಾರಿತ ವ್ಯವಸ್ಥೆಗಳನ್ನು ಮೀರಿದೆ” ಎಂದು ಪ್ರತಿಪಾದಿಸಿದರು.

ಅವರು ಭಾರತೀಯ ರಾಜಕೀಯದಲ್ಲಿ ಸನಾತನ ಹಿಂದುತ್ವ ಎಂಬ ಪದದ ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಗಮನ ಸೆಳೆದರು. “ಇದು ರಾಜಪ್ರಭುತ್ವ ಮತ್ತು ಜಾತೀಯತೆಯನ್ನು ಸಂಕೇತಿಸಲು ಬಂದಿದೆ. ಸನಾತನ ಹಿಂದುತ್ವದ ಅಡಿಯಲ್ಲಿ ಪ್ರಚಾರ ಮಾಡುತ್ತಿರುವುದು ಬ್ರಾಹ್ಮಣಶಾಹಿ ಆಡಳಿತಕ್ಕೆ ಮರಳುವುದು. ಈ ಶಕ್ತಿಗಳು ಪ್ರಜಾಪ್ರಭುತ್ವವನ್ನು ವಿರೋಧಿಸುತ್ತವೆ ಎಂಬುದಕ್ಕೆ ನಮಗೆ ಇನ್ನೇನು ಸಾಕ್ಷಿ ಬೇಕು” ಎಂದು ಅವರು ಪ್ರಶ್ನಿಸಿದರು.

ಗುರುಗಳ ಬೋಧನೆಗಳನ್ನು ತಪ್ಪಾಗಿ ನಿರೂಪಿಸುವ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದ ಅವರು, ಈ ಬೆಳವಣಿಗೆಯನ್ನು ಜಾತಿ ಆಧಾರಿತ ಸಾಮಾಜಿಕ ನಿಯಮಗಳಿಗೆ ಸವಾಲು ಎಂದು ಹೇಳಿದರು. ಅಂತಹ ತಪ್ಪು ವ್ಯಾಖ್ಯಾನಗಳ ವಿರುದ್ಧ ಜಾಗರೂಕರಾಗಿರಬೇಕುಎ ಂದು ಜನರನ್ನು ಒತ್ತಾಯಿಸಿದರು.

ಗುರುಗಳು ಪ್ರಚಾರ ಮಾಡಿದ ಸಮಾನತೆ ಮತ್ತು ಮಾನವತಾವಾದದ ಮೌಲ್ಯಗಳನ್ನು ಎತ್ತಿ ಹಿಡಿದ ಮುಖ್ಯಮಂತ್ರಿಗಳು, ಸಮಾಜ ಸುಧಾರಕನನ್ನು ಸನಾತನ ಧರ್ಮಕ್ಕೆ ಜೋಡಿಸುವ ಪ್ರಯತ್ನಗಳು ಅವರ ಪರಂಪರೆಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪುಣ್ಯಭೂಮಿ ಶಿವಗಿರಿ ಹಾಗೂ ಸನಾತನ ಧರ್ಮದ ಅನುಯಾಯಿಗಳಿಗೆ ವಿಜಯನ್ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ವಿ ಮುರಳೀಧರನ್ ಆರೋಪಿಸಿದ್ದಾರೆ. ವಿಜಯನ್ ಹೇಳಿಕೆಯು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ವಿಜಯನ್ ಅವರನ್ನು ಟೀಕಿಸಿದ ಅವರು, ‘ಧರ್ಮ ಎಂದರೇನು ಎಂಬ ಪ್ರಶ್ನೆಗೆ ಉತ್ತರ ನೀಡದ ಪಠ್ಯ ಎಂದು ಕರೆದರು. ಪವಿತ್ರ ಕುರಾನ್ ಬಗ್ಗೆ ಇಂತಹ ಅನುಮಾನಗಳನ್ನು ಹುಟ್ಟುಹಾಕುವ ಧೈರ್ಯವಿದೆಯೇ ಎಂದು ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಇದನ್ನೂ ಓದಿ; ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...