Homeಮುಖಪುಟನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ, ಬದಲಿಗೆ ಮಾನವೀಯ ಧರ್ಮದ ಹೊಸ ಯುಗದ ತತ್ವಶಾಸ್ತ್ರವನ್ನು ಸ್ಥಾಪಿಸಲು ಅದರಿಂದ ಹೊರಬಂದರು ಎಂದು ಒತ್ತಿ ಹೇಳಿದರು.

ಗುರುವಿನ ಬೋಧನೆಗಳನ್ನು ಸಾಮಾನ್ಯವಾಗಿ ‘ವರ್ಣಾಶ್ರಮ ಧರ್ಮ’ ಎಂದು ಕರೆಯಲ್ಪಡುವ ಸನಾತನ ಧರ್ಮದ ಜಾತಿ-ಆಧಾರಿತ ಸಾಮಾಜಿಕ ಕ್ರಮದೊಂದಿಗೆ ಸಂಯೋಜಿಸುವ ಪ್ರಯತ್ನಗಳನ್ನು ವಿಜಯನ್ ಟೀಕಿಸಿದರು. “ಇದನ್ನು ಗುರು ದೀರ್ಘಕಾಲ ವಿರೋಧಿಸಿದ್ದರು, ‘ಸನಾತನ ಧರ್ಮವು ಚಾತುರ್ವರ್ಣ್ಯಂ ಅನ್ನು ಆಧರಿಸಿದೆ, ಅದು ಒಬ್ಬರ ಜಾತಿಯ ಆಧಾರದ ಮೇಲೆ ಉದ್ಯೋಗಗಳನ್ನು ಎತ್ತಿಹಿಡಿಯುತ್ತದೆ. ಆದರೆ, ಗುರುಗಳು ಅಂತಹ ಕಲ್ಪನೆಗಳನ್ನು ಧಿಕ್ಕರಿಸಲು ಪ್ರತಿಪಾದಿಸಿದರು, ಧರ್ಮದ ಆಧಾರದ ಮೇಲೆ ಕೆಲಸಗಳನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು. ಗುರುಗಳ ತತ್ವವು ಜಾತಿ ಆಧಾರಿತ ವ್ಯವಸ್ಥೆಗಳನ್ನು ಮೀರಿದೆ” ಎಂದು ಪ್ರತಿಪಾದಿಸಿದರು.

ಅವರು ಭಾರತೀಯ ರಾಜಕೀಯದಲ್ಲಿ ಸನಾತನ ಹಿಂದುತ್ವ ಎಂಬ ಪದದ ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಗಮನ ಸೆಳೆದರು. “ಇದು ರಾಜಪ್ರಭುತ್ವ ಮತ್ತು ಜಾತೀಯತೆಯನ್ನು ಸಂಕೇತಿಸಲು ಬಂದಿದೆ. ಸನಾತನ ಹಿಂದುತ್ವದ ಅಡಿಯಲ್ಲಿ ಪ್ರಚಾರ ಮಾಡುತ್ತಿರುವುದು ಬ್ರಾಹ್ಮಣಶಾಹಿ ಆಡಳಿತಕ್ಕೆ ಮರಳುವುದು. ಈ ಶಕ್ತಿಗಳು ಪ್ರಜಾಪ್ರಭುತ್ವವನ್ನು ವಿರೋಧಿಸುತ್ತವೆ ಎಂಬುದಕ್ಕೆ ನಮಗೆ ಇನ್ನೇನು ಸಾಕ್ಷಿ ಬೇಕು” ಎಂದು ಅವರು ಪ್ರಶ್ನಿಸಿದರು.

ಗುರುಗಳ ಬೋಧನೆಗಳನ್ನು ತಪ್ಪಾಗಿ ನಿರೂಪಿಸುವ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದ ಅವರು, ಈ ಬೆಳವಣಿಗೆಯನ್ನು ಜಾತಿ ಆಧಾರಿತ ಸಾಮಾಜಿಕ ನಿಯಮಗಳಿಗೆ ಸವಾಲು ಎಂದು ಹೇಳಿದರು. ಅಂತಹ ತಪ್ಪು ವ್ಯಾಖ್ಯಾನಗಳ ವಿರುದ್ಧ ಜಾಗರೂಕರಾಗಿರಬೇಕುಎ ಂದು ಜನರನ್ನು ಒತ್ತಾಯಿಸಿದರು.

ಗುರುಗಳು ಪ್ರಚಾರ ಮಾಡಿದ ಸಮಾನತೆ ಮತ್ತು ಮಾನವತಾವಾದದ ಮೌಲ್ಯಗಳನ್ನು ಎತ್ತಿ ಹಿಡಿದ ಮುಖ್ಯಮಂತ್ರಿಗಳು, ಸಮಾಜ ಸುಧಾರಕನನ್ನು ಸನಾತನ ಧರ್ಮಕ್ಕೆ ಜೋಡಿಸುವ ಪ್ರಯತ್ನಗಳು ಅವರ ಪರಂಪರೆಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪುಣ್ಯಭೂಮಿ ಶಿವಗಿರಿ ಹಾಗೂ ಸನಾತನ ಧರ್ಮದ ಅನುಯಾಯಿಗಳಿಗೆ ವಿಜಯನ್ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ವಿ ಮುರಳೀಧರನ್ ಆರೋಪಿಸಿದ್ದಾರೆ. ವಿಜಯನ್ ಹೇಳಿಕೆಯು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ವಿಜಯನ್ ಅವರನ್ನು ಟೀಕಿಸಿದ ಅವರು, ‘ಧರ್ಮ ಎಂದರೇನು ಎಂಬ ಪ್ರಶ್ನೆಗೆ ಉತ್ತರ ನೀಡದ ಪಠ್ಯ ಎಂದು ಕರೆದರು. ಪವಿತ್ರ ಕುರಾನ್ ಬಗ್ಗೆ ಇಂತಹ ಅನುಮಾನಗಳನ್ನು ಹುಟ್ಟುಹಾಕುವ ಧೈರ್ಯವಿದೆಯೇ ಎಂದು ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಇದನ್ನೂ ಓದಿ; ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...