Homeಮುಖಪುಟನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ, ಬದಲಿಗೆ ಮಾನವೀಯ ಧರ್ಮದ ಹೊಸ ಯುಗದ ತತ್ವಶಾಸ್ತ್ರವನ್ನು ಸ್ಥಾಪಿಸಲು ಅದರಿಂದ ಹೊರಬಂದರು ಎಂದು ಒತ್ತಿ ಹೇಳಿದರು.

ಗುರುವಿನ ಬೋಧನೆಗಳನ್ನು ಸಾಮಾನ್ಯವಾಗಿ ‘ವರ್ಣಾಶ್ರಮ ಧರ್ಮ’ ಎಂದು ಕರೆಯಲ್ಪಡುವ ಸನಾತನ ಧರ್ಮದ ಜಾತಿ-ಆಧಾರಿತ ಸಾಮಾಜಿಕ ಕ್ರಮದೊಂದಿಗೆ ಸಂಯೋಜಿಸುವ ಪ್ರಯತ್ನಗಳನ್ನು ವಿಜಯನ್ ಟೀಕಿಸಿದರು. “ಇದನ್ನು ಗುರು ದೀರ್ಘಕಾಲ ವಿರೋಧಿಸಿದ್ದರು, ‘ಸನಾತನ ಧರ್ಮವು ಚಾತುರ್ವರ್ಣ್ಯಂ ಅನ್ನು ಆಧರಿಸಿದೆ, ಅದು ಒಬ್ಬರ ಜಾತಿಯ ಆಧಾರದ ಮೇಲೆ ಉದ್ಯೋಗಗಳನ್ನು ಎತ್ತಿಹಿಡಿಯುತ್ತದೆ. ಆದರೆ, ಗುರುಗಳು ಅಂತಹ ಕಲ್ಪನೆಗಳನ್ನು ಧಿಕ್ಕರಿಸಲು ಪ್ರತಿಪಾದಿಸಿದರು, ಧರ್ಮದ ಆಧಾರದ ಮೇಲೆ ಕೆಲಸಗಳನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು. ಗುರುಗಳ ತತ್ವವು ಜಾತಿ ಆಧಾರಿತ ವ್ಯವಸ್ಥೆಗಳನ್ನು ಮೀರಿದೆ” ಎಂದು ಪ್ರತಿಪಾದಿಸಿದರು.

ಅವರು ಭಾರತೀಯ ರಾಜಕೀಯದಲ್ಲಿ ಸನಾತನ ಹಿಂದುತ್ವ ಎಂಬ ಪದದ ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಗಮನ ಸೆಳೆದರು. “ಇದು ರಾಜಪ್ರಭುತ್ವ ಮತ್ತು ಜಾತೀಯತೆಯನ್ನು ಸಂಕೇತಿಸಲು ಬಂದಿದೆ. ಸನಾತನ ಹಿಂದುತ್ವದ ಅಡಿಯಲ್ಲಿ ಪ್ರಚಾರ ಮಾಡುತ್ತಿರುವುದು ಬ್ರಾಹ್ಮಣಶಾಹಿ ಆಡಳಿತಕ್ಕೆ ಮರಳುವುದು. ಈ ಶಕ್ತಿಗಳು ಪ್ರಜಾಪ್ರಭುತ್ವವನ್ನು ವಿರೋಧಿಸುತ್ತವೆ ಎಂಬುದಕ್ಕೆ ನಮಗೆ ಇನ್ನೇನು ಸಾಕ್ಷಿ ಬೇಕು” ಎಂದು ಅವರು ಪ್ರಶ್ನಿಸಿದರು.

ಗುರುಗಳ ಬೋಧನೆಗಳನ್ನು ತಪ್ಪಾಗಿ ನಿರೂಪಿಸುವ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದ ಅವರು, ಈ ಬೆಳವಣಿಗೆಯನ್ನು ಜಾತಿ ಆಧಾರಿತ ಸಾಮಾಜಿಕ ನಿಯಮಗಳಿಗೆ ಸವಾಲು ಎಂದು ಹೇಳಿದರು. ಅಂತಹ ತಪ್ಪು ವ್ಯಾಖ್ಯಾನಗಳ ವಿರುದ್ಧ ಜಾಗರೂಕರಾಗಿರಬೇಕುಎ ಂದು ಜನರನ್ನು ಒತ್ತಾಯಿಸಿದರು.

ಗುರುಗಳು ಪ್ರಚಾರ ಮಾಡಿದ ಸಮಾನತೆ ಮತ್ತು ಮಾನವತಾವಾದದ ಮೌಲ್ಯಗಳನ್ನು ಎತ್ತಿ ಹಿಡಿದ ಮುಖ್ಯಮಂತ್ರಿಗಳು, ಸಮಾಜ ಸುಧಾರಕನನ್ನು ಸನಾತನ ಧರ್ಮಕ್ಕೆ ಜೋಡಿಸುವ ಪ್ರಯತ್ನಗಳು ಅವರ ಪರಂಪರೆಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪುಣ್ಯಭೂಮಿ ಶಿವಗಿರಿ ಹಾಗೂ ಸನಾತನ ಧರ್ಮದ ಅನುಯಾಯಿಗಳಿಗೆ ವಿಜಯನ್ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ವಿ ಮುರಳೀಧರನ್ ಆರೋಪಿಸಿದ್ದಾರೆ. ವಿಜಯನ್ ಹೇಳಿಕೆಯು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ವಿಜಯನ್ ಅವರನ್ನು ಟೀಕಿಸಿದ ಅವರು, ‘ಧರ್ಮ ಎಂದರೇನು ಎಂಬ ಪ್ರಶ್ನೆಗೆ ಉತ್ತರ ನೀಡದ ಪಠ್ಯ ಎಂದು ಕರೆದರು. ಪವಿತ್ರ ಕುರಾನ್ ಬಗ್ಗೆ ಇಂತಹ ಅನುಮಾನಗಳನ್ನು ಹುಟ್ಟುಹಾಕುವ ಧೈರ್ಯವಿದೆಯೇ ಎಂದು ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಇದನ್ನೂ ಓದಿ; ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...