Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....