Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...