Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...