Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...