Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...