Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...