Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...