Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....