Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...