Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...