Homeಕರ್ನಾಟಕನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು "ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ"

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ ವತಿಯಿಂದ ಮಂಗಳೂರಲ್ಲಿ ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ ಆಯೋಜಿಸಲಾಗಿದೆಯೆಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದೊಂದಿಗೆ ಸಂಚರಿಸುವ ಸ್ಥಳೀಯ ಭಜನಾ ತಂಡಗಳು ಮತ್ತು ಬಿಲ್ಲವ ಸಂಘಟನೆಗಳು ಜ.26ರ ಸಂಜೆ 6ಕ್ಕೆ ಮಂಗಳೂರಿನ ಗೋಕರ್ಣನಾಥ ಕ್ಷೇತ್ರ ಬಂದು ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬಿಲ್ಲವ ಸಮುದಾಯದ ವತಿಯಿಂದ ಹೊರಡುವ ಗುರುಗಳ ಸ್ತಬ್ಧಚಿತ್ರ ಜಾಥಾ ಕಂಕನಾಡಿಯ ಗರೋಡಿ ಕ್ಷೇತ್ರದಿಂದ ಹೊರಟು ಲೇಡಿಹಿಲ್ ಮೂಲಕ ಕ್ಷೇತ್ರ ತಲುಪುತ್ತದೆ. ಕಾರ್ಕಳ, ಬೈಂದೂರು, ಉಡುಪಿ, ಪುತ್ತೂರು, ಮುಲ್ಕಿ, ಬಂಟ್ವಾಳದ ತಂಡಗಳು ಒಟ್ಟು ಸೇರಿಕೊಂಡು ಗೋಕರ್ಣನಾಥ ಕ್ಷೇತ್ರ ತಲುಪುತ್ತದೆಂದು ಪದ್ಮರಾಜ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಕಳುಹಿಸದ್ದ ಸ್ತಬ್ಧ ಚಿತ್ರಗಳನ್ನು ಮಹಿಳಾ ಸಬಲಿಕರಣದ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮೆಚ್ಚುಗೆ ಸೂಚಿಸಿತ್ತು. ಆದರೆ ಅದರಲ್ಲಿನ ನಾರಾಯಣ ಗುರುಗಳ ಪ್ರತಿಮೆ ತೆಗೆದು ಶಂಕರಾಚಾರ್ಯರ ಪ್ರತಿಮೆ ಸ್ಥಾಪಿಸುವಂತೆ ಹೇಳಿದ್ದು ನಾರಾಯಣ ಗುರುಗಳ ಅನುಯಾಯಿಗಳಾದ ತಮಗೆಲ್ಲ ನೋವು ತಂದಿದೆ. ಈ ಕುರಿತು ಗೋಕರ್ಣನಾಥ ದೇವಾಲಯದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರಿಗೂ ಬೇಸರವಾಗಿದ್ದು ಇದರ ವಿರುದ್ದ ಧ್ವನಿಯೆತ್ತುವುದು ಅನಿವಾರ್ಯವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಅವರು ತಿಳಿಸಿದ್ದಾರೆ.

ನಾರಾಯಣ ಗುರುಗಳದು ಸಂಘರ್ಷ ರಹಿತ ಶಾಂತಿಯುತ ಕ್ರಾಂತಿ. ಹಾಗಾಗಿ ನಾವು ಸಹ ಈ ಪ್ರತಿಭಟನೆ ಯಾವುದೇ ಘೋಷಣೆ ಕೂಗದೆ ಶಾಂತಿಯುತವಾಗಿ ಮಾಡುತ್ತೇವೆ. ನಾರಾಯಣ ಗುರುಗಳು ಒಂದೇ ಮತ ಒಂದೇ ದೇವರೆಂಬ ಸಂದೇಶ ನೀಡಿರುವಂತವರು. ಆದರೆ ಈ ಸಮಾಜದಲ್ಲಿ ಈಗಲು ಅಸಮಾನತೆಯಿದೆ,  ಹಿಂದುಳಿದಿರುವವರನ್ನು ತುಳಿಯುವ ಕೆಲಸ ಈಗಲೂ ಆಗುತ್ತಿದೆ. ನಾರಾಯಣಗುರುಗಳಿಂದ ಸ್ಥಾಪಿಸಲಾದ ಗೋಕರ್ಣನಾಥ ಕ್ಷೇತ್ರದಲ್ಲಿ ಅವರ ಸಂದೇಶ-ತತ್ವಾದರ್ಶ ಅಕ್ಷರಶಃ ಪಾಲಿಸುವ ಕಾರ್ಯ ಆಗುತ್ತಲೇ ಇದೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರು ನಾರಾಯಣಗುರುಗಳ ತತ್ವ ಪಾಲಿಸಲು ಹಗಲಿರುಳು ದುಡಿದ್ದಾರೆ. ಇಲ್ಲಿ ಹಿಂದುಳಿದ ವರ್ಗದ ಅರ್ಚಕರೆ ಇದ್ದಾರೆ. ಮಹಿಳೆಯರ ಪಾದ ಪೂಜೆ ಮಾಡಲಾಗಿತ್ತು. ದಲಿತ ಅರ್ಚಕರನ್ನು ನೇಮಿಸಲಾಗಿತ್ತು. ಮುಂದಿನ ಜನಾಂಗಕ್ಕೂ ನಾರಾಯಣ ಗುರುಗಳ ತತ್ವ ಮತ್ತು ಸಂದೇಶ ತಲುಪಬೇಕೆಂಬುದು ನಮ್ಮ ಆಶಯವೆಂದು ಪದ್ಮರಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿದ್ದ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ “ಜಾಥಾ ಮೌನವಾಗಿ ನಡೆಯಲಿದೆ. ನಾರಾಯಣಗುರುಗಳು ಶಾಂತಿ ಸಂಕೇತವಾಗಿ ನೀಡಿದ ಹಳದಿ ಪತಾಕೆ ಮತ್ತು ಶಾಲು ಬಿಟ್ಟರೆ ಬೇರೆ ಯಾವ ಬಣ್ಣದ ಬಾವುಟ ಶಾಲಿಗೆ ಜಾಥಾದಲ್ಲಿ ಅವಕಾಶವಿಲ್ಲ. ಗುರುಗಳ ತತ್ವದ ಪ್ರಕಾರ ಎಲ್ಲ ಜಾತಿ, ಮತ, ಧರ್ಮ, ಪಕ್ಷ, ಪಂಥದ ಜಾಥಾ ಇದಾಗಲಿದ್ದು 100ಕ್ಕೂ ಹೆಚ್ಚು ನಾರಾಯಣ ಗುರುಗಳ ಸ್ತಬ್ದ ಚಿತ್ರ ಭಾಗವಹಿಸುವ ನಿರೀಕ್ಷೆಯಿದೆ” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....