Homeಕರ್ನಾಟಕಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

ಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ನಾರಾಯಣ ಗುರು ಪಾಠವನ್ನು ಮರು ಸೇರ್ಪಡೆ ಮಾಡುವಂತೆ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಭುಗಿಲೆದ್ದಿದ್ದ ಬಿಲ್ಲವ ಸಮಾಜದ ಹೋರಾಟಕ್ಕೆ ಕೇಸರಿ ಪಡೆ ಮಣಿದಿದೆ.

ಅವ್ಯವಸ್ಥೆಗಳ ಆಗರವಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯು, ಮುಗಿಯದ ಪುರಾಣವಾಗಿ ಮಾರ್ಪಟ್ಟಿದೆ. ಅಲ್ಲಿದ್ದದ್ದನ್ನು ಇಲ್ಲಿಗೆ, ಇಲ್ಲಿದ್ದಿದ್ದನ್ನು ಅಲ್ಲಿಗೆ ಸ್ಥಾನ ಪಲ್ಲಟ ಮಾಡುವಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಇಡೀ ಪಠ್ಯಪುಸ್ತಕವನ್ನೇ ರದ್ದು ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದರೂ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಷ್ಟೇ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪರಿಷ್ಕರಣೆ ಸಮಿತಿಯು ಹತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ಶ್ರೀ ನಾರಾಯಣಗುರು ವಿಷಯಾಂಶವನ್ನು ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕಕ್ಕೆ ವರ್ಗಾಯಿಸಿತ್ತು. ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕನ್ನಡ ಭಾಷಾ ವಿಷಯದಿಂದ ಪುನಃ ಸಮಾಜ ವಿಜ್ಞಾನಕ್ಕೆ ನಾರಾಯಣ ಗುರು ಪಠ್ಯ ವರ್ಗಾಯಿಸಿ ಸರ್ಕರ ಆದೇಶ ಹೊರಡಿಸಿದೆ.

“10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಇರುವ ಶ್ರೀ ನಾರಾಯಣಗುರು ಅವರ ವಿಷಯಾಂಶಗಳನ್ನು 2022-23ನೇ ಸಾಲಿಗೆ ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನದಿಂದ ಕೈಬಿಟ್ಟು, ಹಿಂದಿನಂತೆ ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಅಳವಡಿಸಿಕೊಂಡು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರವನ್ನೂ ಬರೆದಿದ್ದರು.

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಸುನಿಲ್‌ಕುಮಾರ್‌ ಮನವಿ ಮಾಡಿದ್ದರು.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಬೃಹತ್ ಹೋರಾಟವನ್ನು ಬಿಲ್ಲವ ಸಮುದಾಯ ಕೈಗೊಂಡಿತ್ತು.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...