Homeಕರ್ನಾಟಕಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

ಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ನಾರಾಯಣ ಗುರು ಪಾಠವನ್ನು ಮರು ಸೇರ್ಪಡೆ ಮಾಡುವಂತೆ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಭುಗಿಲೆದ್ದಿದ್ದ ಬಿಲ್ಲವ ಸಮಾಜದ ಹೋರಾಟಕ್ಕೆ ಕೇಸರಿ ಪಡೆ ಮಣಿದಿದೆ.

ಅವ್ಯವಸ್ಥೆಗಳ ಆಗರವಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯು, ಮುಗಿಯದ ಪುರಾಣವಾಗಿ ಮಾರ್ಪಟ್ಟಿದೆ. ಅಲ್ಲಿದ್ದದ್ದನ್ನು ಇಲ್ಲಿಗೆ, ಇಲ್ಲಿದ್ದಿದ್ದನ್ನು ಅಲ್ಲಿಗೆ ಸ್ಥಾನ ಪಲ್ಲಟ ಮಾಡುವಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಇಡೀ ಪಠ್ಯಪುಸ್ತಕವನ್ನೇ ರದ್ದು ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದರೂ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಷ್ಟೇ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪರಿಷ್ಕರಣೆ ಸಮಿತಿಯು ಹತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ಶ್ರೀ ನಾರಾಯಣಗುರು ವಿಷಯಾಂಶವನ್ನು ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕಕ್ಕೆ ವರ್ಗಾಯಿಸಿತ್ತು. ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕನ್ನಡ ಭಾಷಾ ವಿಷಯದಿಂದ ಪುನಃ ಸಮಾಜ ವಿಜ್ಞಾನಕ್ಕೆ ನಾರಾಯಣ ಗುರು ಪಠ್ಯ ವರ್ಗಾಯಿಸಿ ಸರ್ಕರ ಆದೇಶ ಹೊರಡಿಸಿದೆ.

“10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಇರುವ ಶ್ರೀ ನಾರಾಯಣಗುರು ಅವರ ವಿಷಯಾಂಶಗಳನ್ನು 2022-23ನೇ ಸಾಲಿಗೆ ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನದಿಂದ ಕೈಬಿಟ್ಟು, ಹಿಂದಿನಂತೆ ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಅಳವಡಿಸಿಕೊಂಡು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರವನ್ನೂ ಬರೆದಿದ್ದರು.

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಸುನಿಲ್‌ಕುಮಾರ್‌ ಮನವಿ ಮಾಡಿದ್ದರು.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಬೃಹತ್ ಹೋರಾಟವನ್ನು ಬಿಲ್ಲವ ಸಮುದಾಯ ಕೈಗೊಂಡಿತ್ತು.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...