Homeಕರ್ನಾಟಕಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

ಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ನಾರಾಯಣ ಗುರು ಪಾಠವನ್ನು ಮರು ಸೇರ್ಪಡೆ ಮಾಡುವಂತೆ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಭುಗಿಲೆದ್ದಿದ್ದ ಬಿಲ್ಲವ ಸಮಾಜದ ಹೋರಾಟಕ್ಕೆ ಕೇಸರಿ ಪಡೆ ಮಣಿದಿದೆ.

ಅವ್ಯವಸ್ಥೆಗಳ ಆಗರವಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯು, ಮುಗಿಯದ ಪುರಾಣವಾಗಿ ಮಾರ್ಪಟ್ಟಿದೆ. ಅಲ್ಲಿದ್ದದ್ದನ್ನು ಇಲ್ಲಿಗೆ, ಇಲ್ಲಿದ್ದಿದ್ದನ್ನು ಅಲ್ಲಿಗೆ ಸ್ಥಾನ ಪಲ್ಲಟ ಮಾಡುವಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಇಡೀ ಪಠ್ಯಪುಸ್ತಕವನ್ನೇ ರದ್ದು ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದರೂ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಷ್ಟೇ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪರಿಷ್ಕರಣೆ ಸಮಿತಿಯು ಹತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ಶ್ರೀ ನಾರಾಯಣಗುರು ವಿಷಯಾಂಶವನ್ನು ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕಕ್ಕೆ ವರ್ಗಾಯಿಸಿತ್ತು. ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕನ್ನಡ ಭಾಷಾ ವಿಷಯದಿಂದ ಪುನಃ ಸಮಾಜ ವಿಜ್ಞಾನಕ್ಕೆ ನಾರಾಯಣ ಗುರು ಪಠ್ಯ ವರ್ಗಾಯಿಸಿ ಸರ್ಕರ ಆದೇಶ ಹೊರಡಿಸಿದೆ.

“10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಇರುವ ಶ್ರೀ ನಾರಾಯಣಗುರು ಅವರ ವಿಷಯಾಂಶಗಳನ್ನು 2022-23ನೇ ಸಾಲಿಗೆ ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನದಿಂದ ಕೈಬಿಟ್ಟು, ಹಿಂದಿನಂತೆ ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಅಳವಡಿಸಿಕೊಂಡು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರವನ್ನೂ ಬರೆದಿದ್ದರು.

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಸುನಿಲ್‌ಕುಮಾರ್‌ ಮನವಿ ಮಾಡಿದ್ದರು.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಬೃಹತ್ ಹೋರಾಟವನ್ನು ಬಿಲ್ಲವ ಸಮುದಾಯ ಕೈಗೊಂಡಿತ್ತು.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...