Homeಮುಖಪುಟಡಗ್ರ್ ಕೇಸ್: ಸಿಪಿಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್ ಪುತ್ರನ ಬಂಧನ

ಡಗ್ರ್ ಕೇಸ್: ಸಿಪಿಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್ ಪುತ್ರನ ಬಂಧನ

- Advertisement -
- Advertisement -

ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಜೊತೆ ಸಂಪರ್ಕದಲ್ಲಿದ್ದರೆಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಕೇರಳದ ಸಿಪಿಎಂ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿ ಅವರನ್ನು ಬಂಧಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಡ್ರಗ್ ಜಾಲದಲ್ಲಿ ಹಣ ಹೂಡಿದ್ದಾರೆಂಬ ಆರೋಪದ ಮೇರೆಗೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಿನೀಶ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ಇಡಿ ಅಧಿಕಾರಿಗಳು ಬಿನೇಶ್ ಅವರನ್ನು ವಶಕ್ಕೆ ಪಡೆದಿದ್ದು ಮೂರು ಗಂಟೆಗಳ ಕಾಲ ಸತತವಾಗಿ ಪ್ರಶ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬೆಂಗಳೂರು ವಲಯ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಸೆಷನ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಇಡಿ ಅಧಿಕಾರಿಗಳು ವಿಚಾರಣೆಗಾಗಿ 4 ದಿನ ವಶಕ್ಕೆ ಪಡೆದಿದ್ದಾರೆ ಮತ್ತು ಬಿನೀಶ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿವೈರ್.ಇನ್ ಹೇಳಿದೆ.

ಇದನ್ನೂ ಓದಿ: ಡ್ರಗ್ಸ್‌ ಕೇಸ್‌‌ನಿಂದ ಹಿಂದೆ ಸರಿಯುವಂತೆ ಕೋರ್ಟ್‌ಗೆ ಬಾಂಬ್ ಬೆದರಿಕೆ

ಕೇಂದ್ರ ತನಿಖಾ ಸಂಸ್ಥೆ ಬಿನೀಶ್ ಕೊಡಿಯೇರಿ ಅವರನ್ನು ಮೂರು ಬಾರಿ ಪ್ರಶ್ನೆ ಮಾಡಿದೆ. ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ಡ್ರಗ್ ಪೆಡ್ಲರ್ ಎಂ ಅನೂಪ್ ಅವರಿಂದ ಡ್ರಗ್ ವಶಕ್ಕೆ ಪಡೆದು ಅವರನ್ನು ಬಂಧಿಸಿತ್ತು. ಜೊತೆಗೆ ಆರ್.ರವೀಂದ್ರನ್, ಅಂಕಿತಾ.ಡಿ ಅವರಿಂದ 145 ಎಂಡಿಎಂಎ ಮಾತ್ರೆಗಳನ್ನು ಮತ್ತು 2.20 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.

ಬಂಧಿತ ಆರೋಪಿ ಬಿನೀಶ್ ಡ್ರಗ್ ಪೆಡ್ಲರ್ ಎಂ. ಅನೂಪ್ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು. ಇತರೆ ಇಬ್ಬರ ಜೊತೆ ಪೋನ್‌ನಲ್ಲಿ ಮಾತುಕತೆ ನಡೆಸಿದ್ದರು ಎಂದು ಹೇಳಲಾಗಿದೆ. ಈ ನಡುವೆ ಇಂಡಿಯನ್ ಯೂನಿಯನ್ ಮುಸ್ಲೀಂ ಲೀಗ್ (ಐಯುಎಂಲ್) ಬಿನೀಶ್ ಕೊಡಿಯೇರಿ ಡ್ರಗ್ ರಾಕೇಟ್ ಗಳ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿತ್ತು.

ಯೂತ್ ಲೀಗ್ ಪ್ರಧಾನ ಕಾರ್ಯದರ್ಶಿ ಪಿ.ಕೆ. ಫಿರೋಜ್ ಮಾತನಾಡಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿರುವ ಹೋಟೆಲ್ ವ್ಯವಹಾರದಲ್ಲಿ ಬಿನೀಶ್ ಹಣ ಹೂಡಿಕೆ ಮಾಡಿದ್ದ. ಇದು ಡ್ರಗ್ ಪೆಡ್ಲರ್ ಅನೂಪ್ ಅವರಿಗೆ ಸೇರಿದೆ. 2015ರಿಂದಲೂ ಈ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಡ್ರಗ್ಸ್‌ ಮಾಫಿಯಾ: ಬಾಲಿವುಡ್‌ ನಟ ವಿವೇಕ್ ಒಬೆರಾಯ್ ಮನೆ ಶೋಧಿಸಿದ ಬೆಂಗಳೂರು ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...