Homeಮುಖಪುಟದೇಶದ ಪ್ರಮುಖ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥ ನರೇಂದ್ರ ಗಿರಿ ಆತ್ಮಹತ್ಯೆ - ಯುಪಿ ಪೊಲೀಸ್

ದೇಶದ ಪ್ರಮುಖ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥ ನರೇಂದ್ರ ಗಿರಿ ಆತ್ಮಹತ್ಯೆ – ಯುಪಿ ಪೊಲೀಸ್

ಗುರೂಜಿ ಆತ್ಮಹತ್ಯೆ ಮಾಡಿಕೊಳ್ಳಲಾರರು, ಹಣದ ಕಾರಣದಿಂದ ಅವರನ್ನು ಹಿಂಸಿಸಲಾಗಿದೆ. ಪೊಲೀಸ್ ಅಧಿಕಾರಿಗಳು, ಭೂ ಮಾಫಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದೆ ಎಂದು ಅವರ ಶಿಷ್ಯರೊಬ್ಬರು ಆರೋಪಿಸಿದ್ದಾರೆ

- Advertisement -
- Advertisement -

ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ, ಮಹಂತ್ ನರೇಂದ್ರ ಗಿರಿ ಮಹಾರಾಜ್ ಅವರು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪೊಲೀಸರು ಹೇಳಿದ್ದು, ಡೆತ್‌ ನೋಟ್‌ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಅಖಿಲ ಭಾರತೀಯ ಅಖಾಡ ಪರಿಷತ್‌ ದೇಶದ ಅತಿದೊಡ್ಡ ಸಂತರ ಧಾರ್ಮಿಕ ಸಂಸ್ಥೆಯಾಗಿದೆ ಎಂದು ಎನ್‌ಡಿಟಿವಿ ಉಲ್ಲೇಖ ಮಾಡಿದೆ. ನರೇಂದ್ರ ಗಿರಿ ಅದರ ಮುಖ್ಯಸ್ಥರಾಗಿದ್ದರು.

ಅವರ ದೇಹವು ನೈಲಾನ್‌ ಹಗ್ಗಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಡೆತ್‌ ನೋಟ್‌ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಪತ್ರವನ್ನು ಓದುತ್ತಿದ್ದು, ಅವರು ಅದರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿದ್ದರಿಂದ ಅದನ್ನು ಮುರಿಯಬೇಕಾಯಿತು ಮತ್ತು ನರೇಂದ್ರ ಗಿರಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಮಾಡಿದೆ.

ಆತ್ಮಹತ್ಯೆ ಪತ್ರದಲ್ಲಿ ನರೇಂದ್ರ ಗಿರಿ ಅವರು ಶಿಷ್ಯರಾಗಿರುವ ಆನಂದ್ ಗಿರಿ ಮತ್ತು ಇತರ ಶಿಷ್ಯರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪ್ರಯಾಗರಾಜ್ ಪೊಲೀಸರು ತಿಳಿಸಿದ್ದಾರೆ. “ಅವರು ಅನೇಕ ಕಾರಣಗಳಿಗಾಗಿ ಅಸಮಾಧಾನಗೊಂಡಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ” ಎಂದು ಅದು ಹೇಳುತ್ತದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಆತ್ಮಹತ್ಯೆ ಪತ್ರವು 7-8 ಪುಟಗಳಷ್ಟು ಉದ್ದವಾಗಿದೆ ಎಂದು ವರದಿಯಾಗಿದೆ.

ಈ ಮಧ್ಯೆ, ನರೇಂದ್ರ ಮಹಾರಾಜ್ ಗಿರಿ ಅವರ ಶಿಷ್ಯ ಆನಂದ್ ಗಿರಿ, “ಗುರೂಜಿ ಆತ್ಮಹತ್ಯೆ ಮಾಡಿಕೊಳ್ಳಲಾರರು, ಹಣದ ಕಾರಣದಿಂದ ಅವರನ್ನು ಹಿಂಸಿಸಲಾಗಿದೆ. ಇದು ನನ್ನ ವಿರುದ್ಧದ ದೊಡ್ಡ ಪಿತೂರಿ. ಪಕ್ಷಪಾತವಿಲ್ಲದ ತನಿಖೆ ನಡೆಸಬೇಕು. ಪೊಲೀಸ್ ಅಧಿಕಾರಿಗಳು, ಭೂ ಮಾಫಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ. ತನಿಖೆಯಲ್ಲಿ ನಾನು ಪೊಲೀಸರಿಗೆ ಸಹಕರಿಸುತ್ತೇನೆ. ಗುರೂಜಿ ನನ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಾನು ತಪ್ಪಿತಸ್ಥನಾಗಿದ್ದರೆ ಶಿಕ್ಷೆಯನ್ನು ಎದುರಿಸಲು ಸಿದ್ಧ. 15 ದಿನಗಳ ಹಿಂದೆ ಗುರುಜಿಯೊಂದಿಗೆ ಮಾತನಾಡಿದ್ದೆ” ಎಂದು ಹೇಳಿದ್ದಾರೆ.

ಆನಂದ್ ಗಿರಿ ಅವರು ಇನ್ಸ್‌ಪೆಕ್ಟರ್‌ ಆಫ್‌ ಜನರಲ್‌ ಕೆಪಿ ಸಿಂಗ್ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.

ನರೇಂದ್ರೆ ಗಿರಿಯ ಸಾವಿಗೆ ಪ್ರಧಾನಿ ಮೋದಿ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌, ಎಸ್‌ಪಿ ನಾಯಕ ಅಖಿಲೇಶ್‌ ಸೇರಿದಂತೆ ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

ಇದನ್ನೂ ಓದಿ: ಆರ್ಥಿಕತೆ ಸರಿಪಡಿಸಲು 12 ಪತ್ರ ಬರೆದೆ, ಕ್ರಮ ಕೈಗೊಳ್ಳದ ಮೋದಿ ಸರ್ಕಾರ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...