Homeಮುಖಪುಟನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

- Advertisement -
- Advertisement -

|ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು|

ನಾನು ಇಸಿಜಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದೆ.ಇಸಿಜಿ ಮಾಡುವ ಟೆಕ್ನಿಷಿಯನ್ ಒಬ್ಬರು ಲೇಡಿ, ಇನ್ನೊಬ್ಬ ಟೆಕ್ನಿಷಿಯನ್ ಹುಡುಗ.ಆ ಹುಡುಗ ಜೆಡಿಎಸ್‌ನವನು. ಈ ಲೇಡಿ ಬಿಜೆಪಿಯವರು. ಅವನು ಬಿಜೆಪಿಗೆ ಓಟ್ ಮಾಡಲ್ಲ ಅನ್ನೊದು ಗೊತ್ತಿತ್ತು.ಅವನನ್ನ ಕೆಣಕುತ್ತಿದ್ದಳು. ಏನು ನೀವು ಸದಾನಂದ ಗೌಡನಿಗೆ ಓಟು ಕೊಡೋದಿಲ್ಲವಾ… ಇಲ್ಲ ಹಂಗೇನಿಲ್ಲ. ಯಾರಿಗೇನು ಓಟು ಕೊಡಬೇಕು ಅಂತೇನಿಲ್ಲ ಎಂದು ಗೌರವದಿಂದಲೇ ಆ ದಿನ ಯಾರ್ಯಾರು ಎಂದು ಮುಖ ನೋಡಿ ಓಟು ಮಾಡುವುದು ಎಂದ. ನಾನಂದೆ ಸದಾನಂದರ ಮುಖ ನೋಡಿದರೆ ನಿಮಗೆ ಕಾಣೋದು ಬರೀ ಹಲ್ಲು ಮಾತ್ರ.. ಓಟು ಯಾರಿಗೆ ಕೊಡ್ತೀರಿ.. ಹಲ್ಲಿಗೆ ಕೊಟ್ಟು ಬಿಡ್ತೀರಾ ಅಂದಾಗ ಸ್ವಲ್ಪ ಸ್ತಭ್ದರಾದರು. ನಂತರ ಆ ಲೇಡಿ, ಸದಾನಂದ ಗೌಡರಲ್ಲ, ನರೇಂದ್ರ ಮೋದಿಯವರನ್ನು ನೋಡಿ ಓಟು ಕೊಡಬೇಕಿದೆ ಎಂದರು.ನಾನೇಳುವುದೂ ಅದನ್ನೇ, ನರೇಂದ್ರ ಮೋದಿಯವರನ್ನು ನೋಡಿ ಆ ಮುಖದ ಹಿಂದೆ ಅಡಗಿಕೊಂಡಿರುವ ಕರಾಳ ಮುಖದ ದರ್ಶನವನ್ನು ಸಂಪೂರ್ಣವಾಗಿ ಪಡೆದು, ಅದರ ನಂತರವೂ ಓಟು ಮಾಡಬೇಕೆಂದರೆ ಮಾಡಿ ಎಂದೆ.

ನರೇಂದ್ರ ಮೋದಿಯ ಮೊದಲ ಕರಾಳ ಮುಖ ಯಾವುದೆಂದು ನಾನೇಳಲಾ ಎಂದೆ, ಹಾ ಹೇಳಿ ಅಂದರು.ನೋಡಿ ಚೆನ್ನಾಗಿ ನೋಡಿ.

ನರೇಂದ್ರ ಮೋದಿ ಚುನಾವಣೆಗೆ ಅರ್ಜಿ ಹಾಕುವಾಗ ನಾನು ಮದುವೆ ಆಗಿದ್ದೇನೆ ಎಂತಲೂ, ಹೆಂಡತಿಯ ಹೆಸರೂ ಬರೆದಿದ್ದಾನೆ, ಅವನ ಜೊತೆ ಹೆಂಡತಿ ಇದ್ದಾಳಾ.. ಅಥವಾ ಹೆಂಡತಿಗೆ ಏನಾದರೂ ಡೈವರ್ಸ್ ಹಾಕಿ ಆಕೆಗೇನಾದರೂ ನೆಮ್ಮದಿಯ ಬದುಕಿಗೇನಾದರೂ ನರೇಂದ್ರ ಮೋದಿ ವ್ಯವಸ್ಥೆ ಮಾಡಿದ್ದಾನಾ.. ಆಕೆಗೆ ಡೈವರ್ಸೂ ನೀಡಲಿಲ್ಲ, ಆಕೆಯ ಬದುಕನ್ನೂ ನೋಡಲಿಲ್ಲ. ಆಕೆಯ ಹೆಸರನ್ನೂ ಬಳಸಿಕೊಳ್ಳುತ್ತಿದ್ದಾನೆ. ಆಕೆ ಗಂಜಿ ಕುಡಿಯಲಿಕ್ಕೂ ವ್ಯವಸ್ತೆಯೂ ಮಾಡಿಲ್ಲ. ಇದು ಮಹಿಳೆಯ ಮೇಲೆ ನಡೆದಂತಹ ಅತ್ಯಂತ ಕ್ರೌರ್ಯವಲ್ಲವೇ? ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ? ಸಾಮಾನ್ಯ ಪ್ರಜೆ ಜೈಲಿನಲ್ಲಿರಬೇಕಾದ ಅಪರಾಧ ಮಾಡಿ, ಜೈಲಿನಿಂದ ತಪ್ಪಿಸಿಕೊಂಡಿರುವುದು ನರೇಂದ್ರ ಮೋದಿಯಲ್ಲಿರುವಂತಹಾ ಕರಾಳ ಮುಖವಲ್ಲವೇ? ಇಂತಹ ಹಲವಾರು ಮುಖಗಳು ಕಾಣುತ್ತವೆ. ನರೇಂದ್ರ ಮೋದಿಯ ಈ ಮುಖವನ್ನು ಆಳವಾಗಿ ನೋಡಿ, ತೀಕ್ಷಣವಾಗಿ ನೋಡಿ, ಎಲ್ಲಾ ಕರಾಳ ಮುಖದ ದರ್ಶನವನ್ನು ಪಡೆದುಕೊಂಡು ನಂತರವೂ ಅವನಿಗ್ಯಾರಾದರೂ ಓಟು ಮಾಡೋದಾದರೆ ಅವರು ಪಿಶಾಚಿಗಳೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...