Homeಕರ್ನಾಟಕCAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

CAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ. ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಮರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಅವರು ಹೇಳಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದು ಅವರು ಸವಾಲು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...