Homeಕರ್ನಾಟಕCAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

CAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ. ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಮರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಅವರು ಹೇಳಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದು ಅವರು ಸವಾಲು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...