Homeಅಂಕಣಗಳುಪ್ರಧಾನಿ ಹುದ್ದೆಯ ಘನತೆ ಹಾಳು ಮಾಡಿದ ನರೇಂದ್ರ ಮೋದಿ

ಪ್ರಧಾನಿ ಹುದ್ದೆಯ ಘನತೆ ಹಾಳು ಮಾಡಿದ ನರೇಂದ್ರ ಮೋದಿ

ಇದನ್ನು ಓದಿರಿ

- Advertisement -
- Advertisement -

|ನ್ಯಾಯಪಥ ಸಂಪಾದಕೀಯ |

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕಳೆದೊಂದು ವಾರದಿಂದ ಬಹಳ ಸುದ್ದಿಯಲ್ಲಿದ್ದಾರೆ. ಒಳ್ಳೆಯ ಸಾಧನೆಯ ಕಾರಣಕ್ಕಾಗಿ, ಇಲ್ಲವೇ ದೇಶದ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ವಿಚಾರದಲ್ಲಿ ಸುದ್ದಿಯಾಗಿದ್ದರೆ ಎಲ್ಲರೂ ಸಂತಸ ಪಡಬಹುದಿತ್ತು. ಆದರೆ ಅವರ ಅಜ್ಞಾನದ ಕಾರಣಕ್ಕಾಗಿ, ಸಾರ್ವಜನಿಕವಾಗಿ ಒಂದರ ಮೇಲೊಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಕಾರಣಕ್ಕಾಗಿ ಪ್ರಧಾನಿಯವರು ಸುದ್ದಿಯಲ್ಲಿರುವುದು ದುರಂತವಾಗಿದೆ.

ನ್ಯೂಸ್ ನೇಷನ್ ಎಂಬ ಚಾನೆಲ್ ಒಂದಕ್ಕೆ ಸಂದರ್ಶನ ನೀಡುತ್ತ, ನರೇಂದ್ರ ಮೋದಿಯವರು ‘ಕೆಟ್ಟ ಹವಾಮಾನ ಮತ್ತು ಮೋಡಗಳಿರುವ ಕಾರಣಕ್ಕಾಗಿ ಬಾಲಾಕೋಟ್ ವಾಯುದಾಳಿಯನ್ನು ಮುಂದೂಡುವ ಬಗ್ಗೆ ತಜ್ಞರು ನಿರ್ಧರಿಸಿದ್ದರು. ಆದರೆ ನಾನು ಮೋಡವಿದ್ದರೆ ಯುದ್ಧವಿಮಾನಗಳು ರೇಡಾರ್‍ನಿಂದ ತಪ್ಪಿಸಿಕೊಳ್ಳಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದ್ದೆ’ ಎಂದು ಹೇಳಿದ್ದಾರೆ. ಒಂದು ಘನತೆಯುತ ಪ್ರಧಾನಿಯ ಸ್ಥಾನದಲ್ಲಿರುವವರು ತಿಳಿದುಕೊಂಡು ಮಾತನಾಡಬೇಕು. ತಾಂತ್ರಿಕ ವಿಚಾರಗಳು ಗೊತ್ತಿಲ್ಲದಿದ್ದರೆ ಸುಮ್ಮನಿರಬೇಕು. ಆದರೆ ಯಾವಾಗಲೂ ಪ್ರಶಂಸೆ ಬಯಸುವ ಮೋದಿಯವರ ಈ ಹೇಳಿಕೆಯಿಂದ ಇಡೀ ದೇಶವೇ ಮುಜುಗರಕ್ಕೊಳಪಡಬೇಕಾದ ಪರಿಸ್ಥಿತಿ ಬಂದಿದೆ.

ಮೊದಲನೆಯದಾಗಿ ಮಳೆ, ಮೋಡ ಮಂಜು ಏನೇ ಇದ್ದರೂ ರೇಡಾರ್ ಕಿರಣಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂಬ ಸತ್ಯವನ್ನು ಸೇನೆಯಲ್ಲಿರುವವರು ತಿಳಿದೂ ಸಹ ಯಾರು ಅಂದು ಪ್ರಶ್ನಿಸದೇ ಇರುವುದು ಏನನ್ನು ಸೂಚಿಸುತ್ತದೆ? ಅಂದು ಕಣ್ಣು ಮುಚ್ಚಿಕೊಂಡು ವಾಯುಪಡೆಯ ಅಧಿಕಾರಿಗಳು ಮೋದಿಯವರ ಆದೇಶವನ್ನು ಪಾಲಿಸಿದ್ದಾರೆ. ಮುಂದೆಯೂ ಇಂತಹದೇ ಅವೈಜ್ಞಾನಿಕ ಆದೇಶಗಳನ್ನು ಮೋದಿ ನೀಡಿದರೆ ಅದರ ಬೆಲೆ ತೆರಬೇಕಾದವರು ಯಾರು?

ಎರಡನೆಯದಾಗಿ ರಫೇಲ್ ವಿಷಯದಲ್ಲಿ ಅವ್ಯವಹಾರ ನಡೆದಿದೆ ಎಂದು ವಿಪಕ್ಷಗಳು ಆರೋಪ ಮಾಡಿದಾಗ ಅದು ರಕ್ಷಣಾ ವಿಷಯವಾದ್ದರಿಂದ ಕೋರ್ಟಿಗೆ ರಹಸ್ಯ ದಾಖಲೆಗಳನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಈಗ ಯಾರು ಕೇಳದಿದ್ದರೂ ಸಹ ಖುದ್ದು ಮೋದಿಯವರೇ ನಿರ್ದಿಷ್ಟ ವಾಯುದಾಳಿಯೊಂದರ ವಿವರಗಳನ್ನು ಟಿವಿಯೊಂದರಲ್ಲಿ ಕುಳಿತು ಹೇಳುತ್ತಾರೆಂದರೆ ಏನರ್ಥ? ದೇಶದ ರಕ್ಷಣಾ ರಹಸ್ಯಗಳನ್ನು ತನ್ನ ಸ್ವಂತ ಇಮೇಜ್ ಹೆಚ್ಚಿಸಿಕೊಳ್ಳಲು ಬಹಿರಂಗ ಮಾಡುವುದು ಸರ್ವಥಾ ಸರಿಯಲ್ಲ.

ಮೂರನೆಯದಾಗಿ ಬಾಲಾಕೋಟ್ ವಾಯುದಾಳಿಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಈ ಪ್ರಧಾನಿಯವರ ಅಜ್ಞಾನದ ಆದೇಶವೇ ಕಾರಣ ಎಂಬ ಅನುಮಾನ ದಟ್ಟವಾಗುತ್ತಲಿದೆ. ಬಾಲಾಕೋಟ್ ವಾಯುದಾಳಿಯಲ್ಲಿ 300 ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದರೂ ಇದುವರೆಗೂ ಅದಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ. ಒಬ್ಬರೂ ಕೂಡ ಸಾವನ್ನಪ್ಪಿಲ್ಲ ಎಂಬುವವರೆಗು ವರದಿಗಳು ಹರಿದಾಡುತ್ತಿವೆ. ಈಗ ಪ್ರಧಾನಿಯವರ ಹೇಳಿಕೆ ನೋಡಿದರೆ ಅದಕ್ಕೆ ಮತ್ತಷ್ಟು ಇಂಬು ಕೊಡುವಂತೆ ಕಾಣುತ್ತಿವೆ. ವಾಯುದಾಳಿಯಲ್ಲಿ ಒಬ್ಬ ವಿಂಗ್ ಕಮಾಂಡರ್ ಹುತಾತ್ಮನಾಗಿದ್ದರೆ ಮತ್ತೊಬ್ಬ ಅಭಿನಂದನ್ ಎರಡು ದಿನಗಳ ಕಾಲ ಪಾಕ್‍ನಲ್ಲಿ ಸೆರೆಯಾಳಾಗಬೇಕಾಗಿ ಬಂದಿದ್ದು ಪ್ರಧಾನಿಯವರ ಆದೇಶದಿಂದಲೇ ಎಂಬ ಪ್ರಶ್ನೆ ಎದುರಾಗುತ್ತಿದೆ

ನಾಲ್ಕನೆಯದಾಗಿ ಮೋದಿಯವರ ಈ ಹೇಳಿಕೆಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಬರುವಂತಾಗಿದೆ. ಏಕೆಂದರೆ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ಪ್ರಧಾನಿಯವರ ಇಂತಹ ಹೇಳಿಕೆಗಳು ಜೋಕ್‍ನಂತಾಗಿಬಿಡುವ ಅಪಾಯವಿದೆ. ಈಗಾಗಲೇ ಭಾರತದಲ್ಲಿ ಈ ಕುರಿತು ಲಕ್ಷಾಂತರ ಜೋಕ್‍ಗಳು, ಮೀಮ್‍ಗಳು, ಟ್ರೋಲ್‍ಗಳು ಹರಿದಾಡುತ್ತಿವೆ. ‘ಇವು ಮೋದಿಯವರ ಮೇಲಿನ ಜೋಕ್‍ಗಳಲ್ಲ, ಬದಲಿಗೆ ಮೋದಿಯವರನ್ನು ಇನ್ನೂ ಬೆಂಬಲಿಸುತ್ತಿರುವ ವಿದ್ಯಾವಂತ ವರ್ಗದವರ ಮೇಲಿನ ಜೋಕ್‍ಗಳು’ ಎಂದು ಪತ್ರಕರ್ತರೊಬ್ಬರು ಮಾರ್ಮಿಕವಾಗಿ ನುಡಿದಿರುವುದು ಸತ್ಯವಾಗಿದೆ.

ಮೋದಿಯವರ ಸುಳ್ಳು ಇಲ್ಲಿಗೆ ನಿಲ್ಲುವುದಿಲ್ಲ. ಅದೇ ಸಂದರ್ಶನದಲ್ಲಿ ಮುಂದುವರೆದು ‘ನಾನು 1987-88ರಲ್ಲಿ ನನ್ನ ಡಿಜಿಟಲ್ ಕ್ಯಾಮರದಿಂದ ಅಡ್ವಾಣಿಯವರ ವರ್ಣರಂಜಿತ ಫೋಟೊ ತೆಗೆದು ದೆಹಲಿಗೆ ಇಮೇಲ್ ಮಾಡಿದ್ದೆ’ ಎಂದು ಮತ್ತೊಂದು ಸುಳ್ಳು ಹೇಳಿಬಿಟ್ಟಿದ್ದಾರೆ. ವಾಸ್ತವವಾಗಿ 90ರ ದಶಕದ ನಂತರ ಡಿಜಿಟಲ್ ಕ್ಯಾಮರ ಭಾರತದ ಮಾರುಕಟ್ಟೆಗೆ ಬಂದಿದೆ. ಇನ್ನು ಆಗಸ್ಟ್ 14, 1995ರಂದು ವಿಎಸ್‍ಎನ್‍ಎಲ್ ಇಂಟರ್‍ನೆಟ್ ಸೇವೆ ಬಳಕೆಗೆ ಬಂದಿದೆ. ಆದರೆ ಮೋದಿ 1987-88ರಲ್ಲಿಯೇ ಬಳಸಿದ್ದೆ ಎನ್ನುವ ಮೂಲಕ ಹಾಸ್ಯದ ವಸ್ತು ಆಗಿದ್ದಾರೆ. ದೇಶದ ಪ್ರಧಾನಿಯೇ ಹೀಗಾದರೆ ದೇಶದ ಗೌರವ ಉಳಿದೀತೇ?

ಇದನ್ನು ಓದಿರಿ ನ್ಯಾಯಪಥ ಸಂಪಾದಕೀಯ

ಮೋದಿಯವರ ಈ ರೀತಿಯ ಸುಳ್ಳು ಹೇಳಿಕೆಗಳು ಇದೇ ಮೊದಲೇನಲ್ಲ. ಈ ಹಿಂದೆ ಸಹ ಅವರು ಗಟಾರಗಳಿಂದ ಗ್ಯಾಸ್ ಉತ್ಪಾದಿಸಬಹುದೆಂದು ಹೇಳಿದ್ದರು. ವಿಶ್ವದಾದ್ಯಂತ ಆಗುತ್ತಿರುವ ಹವಾಮಾನ ಬದಲಾವಣೆ ಪ್ರಶ್ನೆ ಬಂದಾಗ ಮೋದಿಯವರು ಹವಾಮಾನ ಬದಲಾವಣೆಯಾಗುತ್ತಿಲ್ಲ, ನಮ್ಮ ಚರ್ಮ ಬದಲಾಗುತ್ತಿದೆ ಅಷ್ಟೆ ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.

ಮೋದಿ ಮಾತ್ರವಲ್ಲ ಅವರ ಸಹೋದ್ಯೋಗಿಗಳು ಸಹ ಸುಳ್ಳು ಹೇಳುವುದರಲ್ಲಿ ಕಡಿಮೆ ಏನಿಲ್ಲ ಎಂದು ತೋರಿಸಿ ಕೊಟ್ಟಿದ್ದಾರೆ. ಗಣೇಶನದು ಪ್ಲಾಸ್ಟಿಕ್ ಸರ್ಜರಿ, ವೇದಕಾಲದಲ್ಲೇ ನಮ್ಮ ಬಳಿ ವಿಮಾನವಿತ್ತು, ಪ್ರಣಾಳಶಿಶು ತಂತ್ರಜ್ಞಾನವು ಇತ್ತು, ಮಂಗನಿಂದ ಮಾನವ ಆಗಿದ್ದು ಸುಳ್ಳು ಎಂದೆಲ್ಲಾ ಹೇಳಿಕೆಗಳನ್ನು ನೀಡಿದ್ದರಿಂದ ಎರಡು ಮೂರು ಬಾರಿ ಅಂತಾರಾಷ್ಟ್ರೀಯ ವಿಜ್ಞಾನಿಗಳ ಸಮುದಾಯವು ಈ ಮೋದಿ ಸಹೋದ್ಯೋಗಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

ಮೋದಿಯವರು ವಿಜ್ಞಾನ ಮತ್ತು ವೈಚಾರಿಕತೆಯನ್ನು ನಿರ್ಲಕ್ಷಿಸಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ. ವಿದ್ವತ್ತು, ವಿದ್ವಾಂಸರು, ಬುದ್ದಿಜೀವಿಗಳು, ವಿಜ್ಞಾನಿಗಳೆಂದರೆ ಈ ಸರ್ಕಾರಕ್ಕೆ ಆಗಿಬರುವುದಿಲ್ಲ. ಎಲ್ಲಿಯವರೆಗೆ ಈ ಬಿಕ್ಕಟ್ಟು ಬಗೆಹರಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ ಅಭಿವೃದ್ದಿಯಾಗುವುದಿಲ್ಲ ಮಾತ್ರವಲ್ಲ ಪ್ರಪಂಚದಲ್ಲಿ ತನ್ನ ಹೆಸರನ್ನು ಮತ್ತಷ್ಟು ಕೆಡಿಸಿಕೊಳ್ಳುವ ಅಪಾಯವಿದೆ. ಮೋದಿಯವರಿಗೆ ಇದು ಅರ್ಥವಾಗಬೇಕು ಅಥವಾ ಅಧಿಕಾರದಿಂದ ಕೆಳಗಿಳಿಯಬೇಕು ಇವೆರಡೆ ಸದ್ಯಕ್ಕಿರುವ ದಾರಿಗಳಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...