Homeಅಂಕಣಗಳುಪ್ರಧಾನಿ ಹುದ್ದೆಯ ಘನತೆ ಹಾಳು ಮಾಡಿದ ನರೇಂದ್ರ ಮೋದಿ

ಪ್ರಧಾನಿ ಹುದ್ದೆಯ ಘನತೆ ಹಾಳು ಮಾಡಿದ ನರೇಂದ್ರ ಮೋದಿ

ಇದನ್ನು ಓದಿರಿ

- Advertisement -
- Advertisement -

|ನ್ಯಾಯಪಥ ಸಂಪಾದಕೀಯ |

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕಳೆದೊಂದು ವಾರದಿಂದ ಬಹಳ ಸುದ್ದಿಯಲ್ಲಿದ್ದಾರೆ. ಒಳ್ಳೆಯ ಸಾಧನೆಯ ಕಾರಣಕ್ಕಾಗಿ, ಇಲ್ಲವೇ ದೇಶದ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ವಿಚಾರದಲ್ಲಿ ಸುದ್ದಿಯಾಗಿದ್ದರೆ ಎಲ್ಲರೂ ಸಂತಸ ಪಡಬಹುದಿತ್ತು. ಆದರೆ ಅವರ ಅಜ್ಞಾನದ ಕಾರಣಕ್ಕಾಗಿ, ಸಾರ್ವಜನಿಕವಾಗಿ ಒಂದರ ಮೇಲೊಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಕಾರಣಕ್ಕಾಗಿ ಪ್ರಧಾನಿಯವರು ಸುದ್ದಿಯಲ್ಲಿರುವುದು ದುರಂತವಾಗಿದೆ.

ನ್ಯೂಸ್ ನೇಷನ್ ಎಂಬ ಚಾನೆಲ್ ಒಂದಕ್ಕೆ ಸಂದರ್ಶನ ನೀಡುತ್ತ, ನರೇಂದ್ರ ಮೋದಿಯವರು ‘ಕೆಟ್ಟ ಹವಾಮಾನ ಮತ್ತು ಮೋಡಗಳಿರುವ ಕಾರಣಕ್ಕಾಗಿ ಬಾಲಾಕೋಟ್ ವಾಯುದಾಳಿಯನ್ನು ಮುಂದೂಡುವ ಬಗ್ಗೆ ತಜ್ಞರು ನಿರ್ಧರಿಸಿದ್ದರು. ಆದರೆ ನಾನು ಮೋಡವಿದ್ದರೆ ಯುದ್ಧವಿಮಾನಗಳು ರೇಡಾರ್‍ನಿಂದ ತಪ್ಪಿಸಿಕೊಳ್ಳಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದ್ದೆ’ ಎಂದು ಹೇಳಿದ್ದಾರೆ. ಒಂದು ಘನತೆಯುತ ಪ್ರಧಾನಿಯ ಸ್ಥಾನದಲ್ಲಿರುವವರು ತಿಳಿದುಕೊಂಡು ಮಾತನಾಡಬೇಕು. ತಾಂತ್ರಿಕ ವಿಚಾರಗಳು ಗೊತ್ತಿಲ್ಲದಿದ್ದರೆ ಸುಮ್ಮನಿರಬೇಕು. ಆದರೆ ಯಾವಾಗಲೂ ಪ್ರಶಂಸೆ ಬಯಸುವ ಮೋದಿಯವರ ಈ ಹೇಳಿಕೆಯಿಂದ ಇಡೀ ದೇಶವೇ ಮುಜುಗರಕ್ಕೊಳಪಡಬೇಕಾದ ಪರಿಸ್ಥಿತಿ ಬಂದಿದೆ.

ಮೊದಲನೆಯದಾಗಿ ಮಳೆ, ಮೋಡ ಮಂಜು ಏನೇ ಇದ್ದರೂ ರೇಡಾರ್ ಕಿರಣಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂಬ ಸತ್ಯವನ್ನು ಸೇನೆಯಲ್ಲಿರುವವರು ತಿಳಿದೂ ಸಹ ಯಾರು ಅಂದು ಪ್ರಶ್ನಿಸದೇ ಇರುವುದು ಏನನ್ನು ಸೂಚಿಸುತ್ತದೆ? ಅಂದು ಕಣ್ಣು ಮುಚ್ಚಿಕೊಂಡು ವಾಯುಪಡೆಯ ಅಧಿಕಾರಿಗಳು ಮೋದಿಯವರ ಆದೇಶವನ್ನು ಪಾಲಿಸಿದ್ದಾರೆ. ಮುಂದೆಯೂ ಇಂತಹದೇ ಅವೈಜ್ಞಾನಿಕ ಆದೇಶಗಳನ್ನು ಮೋದಿ ನೀಡಿದರೆ ಅದರ ಬೆಲೆ ತೆರಬೇಕಾದವರು ಯಾರು?

ಎರಡನೆಯದಾಗಿ ರಫೇಲ್ ವಿಷಯದಲ್ಲಿ ಅವ್ಯವಹಾರ ನಡೆದಿದೆ ಎಂದು ವಿಪಕ್ಷಗಳು ಆರೋಪ ಮಾಡಿದಾಗ ಅದು ರಕ್ಷಣಾ ವಿಷಯವಾದ್ದರಿಂದ ಕೋರ್ಟಿಗೆ ರಹಸ್ಯ ದಾಖಲೆಗಳನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಈಗ ಯಾರು ಕೇಳದಿದ್ದರೂ ಸಹ ಖುದ್ದು ಮೋದಿಯವರೇ ನಿರ್ದಿಷ್ಟ ವಾಯುದಾಳಿಯೊಂದರ ವಿವರಗಳನ್ನು ಟಿವಿಯೊಂದರಲ್ಲಿ ಕುಳಿತು ಹೇಳುತ್ತಾರೆಂದರೆ ಏನರ್ಥ? ದೇಶದ ರಕ್ಷಣಾ ರಹಸ್ಯಗಳನ್ನು ತನ್ನ ಸ್ವಂತ ಇಮೇಜ್ ಹೆಚ್ಚಿಸಿಕೊಳ್ಳಲು ಬಹಿರಂಗ ಮಾಡುವುದು ಸರ್ವಥಾ ಸರಿಯಲ್ಲ.

ಮೂರನೆಯದಾಗಿ ಬಾಲಾಕೋಟ್ ವಾಯುದಾಳಿಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಈ ಪ್ರಧಾನಿಯವರ ಅಜ್ಞಾನದ ಆದೇಶವೇ ಕಾರಣ ಎಂಬ ಅನುಮಾನ ದಟ್ಟವಾಗುತ್ತಲಿದೆ. ಬಾಲಾಕೋಟ್ ವಾಯುದಾಳಿಯಲ್ಲಿ 300 ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದರೂ ಇದುವರೆಗೂ ಅದಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ. ಒಬ್ಬರೂ ಕೂಡ ಸಾವನ್ನಪ್ಪಿಲ್ಲ ಎಂಬುವವರೆಗು ವರದಿಗಳು ಹರಿದಾಡುತ್ತಿವೆ. ಈಗ ಪ್ರಧಾನಿಯವರ ಹೇಳಿಕೆ ನೋಡಿದರೆ ಅದಕ್ಕೆ ಮತ್ತಷ್ಟು ಇಂಬು ಕೊಡುವಂತೆ ಕಾಣುತ್ತಿವೆ. ವಾಯುದಾಳಿಯಲ್ಲಿ ಒಬ್ಬ ವಿಂಗ್ ಕಮಾಂಡರ್ ಹುತಾತ್ಮನಾಗಿದ್ದರೆ ಮತ್ತೊಬ್ಬ ಅಭಿನಂದನ್ ಎರಡು ದಿನಗಳ ಕಾಲ ಪಾಕ್‍ನಲ್ಲಿ ಸೆರೆಯಾಳಾಗಬೇಕಾಗಿ ಬಂದಿದ್ದು ಪ್ರಧಾನಿಯವರ ಆದೇಶದಿಂದಲೇ ಎಂಬ ಪ್ರಶ್ನೆ ಎದುರಾಗುತ್ತಿದೆ

ನಾಲ್ಕನೆಯದಾಗಿ ಮೋದಿಯವರ ಈ ಹೇಳಿಕೆಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಬರುವಂತಾಗಿದೆ. ಏಕೆಂದರೆ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ಪ್ರಧಾನಿಯವರ ಇಂತಹ ಹೇಳಿಕೆಗಳು ಜೋಕ್‍ನಂತಾಗಿಬಿಡುವ ಅಪಾಯವಿದೆ. ಈಗಾಗಲೇ ಭಾರತದಲ್ಲಿ ಈ ಕುರಿತು ಲಕ್ಷಾಂತರ ಜೋಕ್‍ಗಳು, ಮೀಮ್‍ಗಳು, ಟ್ರೋಲ್‍ಗಳು ಹರಿದಾಡುತ್ತಿವೆ. ‘ಇವು ಮೋದಿಯವರ ಮೇಲಿನ ಜೋಕ್‍ಗಳಲ್ಲ, ಬದಲಿಗೆ ಮೋದಿಯವರನ್ನು ಇನ್ನೂ ಬೆಂಬಲಿಸುತ್ತಿರುವ ವಿದ್ಯಾವಂತ ವರ್ಗದವರ ಮೇಲಿನ ಜೋಕ್‍ಗಳು’ ಎಂದು ಪತ್ರಕರ್ತರೊಬ್ಬರು ಮಾರ್ಮಿಕವಾಗಿ ನುಡಿದಿರುವುದು ಸತ್ಯವಾಗಿದೆ.

ಮೋದಿಯವರ ಸುಳ್ಳು ಇಲ್ಲಿಗೆ ನಿಲ್ಲುವುದಿಲ್ಲ. ಅದೇ ಸಂದರ್ಶನದಲ್ಲಿ ಮುಂದುವರೆದು ‘ನಾನು 1987-88ರಲ್ಲಿ ನನ್ನ ಡಿಜಿಟಲ್ ಕ್ಯಾಮರದಿಂದ ಅಡ್ವಾಣಿಯವರ ವರ್ಣರಂಜಿತ ಫೋಟೊ ತೆಗೆದು ದೆಹಲಿಗೆ ಇಮೇಲ್ ಮಾಡಿದ್ದೆ’ ಎಂದು ಮತ್ತೊಂದು ಸುಳ್ಳು ಹೇಳಿಬಿಟ್ಟಿದ್ದಾರೆ. ವಾಸ್ತವವಾಗಿ 90ರ ದಶಕದ ನಂತರ ಡಿಜಿಟಲ್ ಕ್ಯಾಮರ ಭಾರತದ ಮಾರುಕಟ್ಟೆಗೆ ಬಂದಿದೆ. ಇನ್ನು ಆಗಸ್ಟ್ 14, 1995ರಂದು ವಿಎಸ್‍ಎನ್‍ಎಲ್ ಇಂಟರ್‍ನೆಟ್ ಸೇವೆ ಬಳಕೆಗೆ ಬಂದಿದೆ. ಆದರೆ ಮೋದಿ 1987-88ರಲ್ಲಿಯೇ ಬಳಸಿದ್ದೆ ಎನ್ನುವ ಮೂಲಕ ಹಾಸ್ಯದ ವಸ್ತು ಆಗಿದ್ದಾರೆ. ದೇಶದ ಪ್ರಧಾನಿಯೇ ಹೀಗಾದರೆ ದೇಶದ ಗೌರವ ಉಳಿದೀತೇ?

ಇದನ್ನು ಓದಿರಿ ನ್ಯಾಯಪಥ ಸಂಪಾದಕೀಯ

ಮೋದಿಯವರ ಈ ರೀತಿಯ ಸುಳ್ಳು ಹೇಳಿಕೆಗಳು ಇದೇ ಮೊದಲೇನಲ್ಲ. ಈ ಹಿಂದೆ ಸಹ ಅವರು ಗಟಾರಗಳಿಂದ ಗ್ಯಾಸ್ ಉತ್ಪಾದಿಸಬಹುದೆಂದು ಹೇಳಿದ್ದರು. ವಿಶ್ವದಾದ್ಯಂತ ಆಗುತ್ತಿರುವ ಹವಾಮಾನ ಬದಲಾವಣೆ ಪ್ರಶ್ನೆ ಬಂದಾಗ ಮೋದಿಯವರು ಹವಾಮಾನ ಬದಲಾವಣೆಯಾಗುತ್ತಿಲ್ಲ, ನಮ್ಮ ಚರ್ಮ ಬದಲಾಗುತ್ತಿದೆ ಅಷ್ಟೆ ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.

ಮೋದಿ ಮಾತ್ರವಲ್ಲ ಅವರ ಸಹೋದ್ಯೋಗಿಗಳು ಸಹ ಸುಳ್ಳು ಹೇಳುವುದರಲ್ಲಿ ಕಡಿಮೆ ಏನಿಲ್ಲ ಎಂದು ತೋರಿಸಿ ಕೊಟ್ಟಿದ್ದಾರೆ. ಗಣೇಶನದು ಪ್ಲಾಸ್ಟಿಕ್ ಸರ್ಜರಿ, ವೇದಕಾಲದಲ್ಲೇ ನಮ್ಮ ಬಳಿ ವಿಮಾನವಿತ್ತು, ಪ್ರಣಾಳಶಿಶು ತಂತ್ರಜ್ಞಾನವು ಇತ್ತು, ಮಂಗನಿಂದ ಮಾನವ ಆಗಿದ್ದು ಸುಳ್ಳು ಎಂದೆಲ್ಲಾ ಹೇಳಿಕೆಗಳನ್ನು ನೀಡಿದ್ದರಿಂದ ಎರಡು ಮೂರು ಬಾರಿ ಅಂತಾರಾಷ್ಟ್ರೀಯ ವಿಜ್ಞಾನಿಗಳ ಸಮುದಾಯವು ಈ ಮೋದಿ ಸಹೋದ್ಯೋಗಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

ಮೋದಿಯವರು ವಿಜ್ಞಾನ ಮತ್ತು ವೈಚಾರಿಕತೆಯನ್ನು ನಿರ್ಲಕ್ಷಿಸಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ. ವಿದ್ವತ್ತು, ವಿದ್ವಾಂಸರು, ಬುದ್ದಿಜೀವಿಗಳು, ವಿಜ್ಞಾನಿಗಳೆಂದರೆ ಈ ಸರ್ಕಾರಕ್ಕೆ ಆಗಿಬರುವುದಿಲ್ಲ. ಎಲ್ಲಿಯವರೆಗೆ ಈ ಬಿಕ್ಕಟ್ಟು ಬಗೆಹರಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ ಅಭಿವೃದ್ದಿಯಾಗುವುದಿಲ್ಲ ಮಾತ್ರವಲ್ಲ ಪ್ರಪಂಚದಲ್ಲಿ ತನ್ನ ಹೆಸರನ್ನು ಮತ್ತಷ್ಟು ಕೆಡಿಸಿಕೊಳ್ಳುವ ಅಪಾಯವಿದೆ. ಮೋದಿಯವರಿಗೆ ಇದು ಅರ್ಥವಾಗಬೇಕು ಅಥವಾ ಅಧಿಕಾರದಿಂದ ಕೆಳಗಿಳಿಯಬೇಕು ಇವೆರಡೆ ಸದ್ಯಕ್ಕಿರುವ ದಾರಿಗಳಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...