ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂದಿಸಿರುವುದು ಅಸಹ್ಯ ಹುಟ್ಟಿಸುತ್ತದೆ ಎಂದು ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಚಿದಂಬರಂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರ ಮೇಲೆ ಯಾವುದೇ ಆರೋಪಗಳು ಇಲ್ಲದಿದ್ದರೂ ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುದು ಮತ್ತು ಬಂಧನದಲ್ಲಿಟ್ಟಿರುವುದು ಹೇಯ ಕೃತ್ಯ ಎಂದು ಟೀಕಿಸಿದ್ದಾರೆ.
उमर अब्दुल्ला, महबूबा मुफ़्ती और अन्य लोगों के खिलाफ पब्लिक सेफ्टी एक्ट के क्रूर आह्वान से हैरान और परेशान हूं।
— P. Chidambaram (@PChidambaram_IN) February 7, 2020
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳು ಮತ್ತು ಎರಡು ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆ ಬಳಸಿರುವುದು ಆಘಾತ ತಂದಿದೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಅವರು ಯಾವುದೇ ಕೃತ್ಯವನ್ನು ಮಾಡಿಲ್ಲ. ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಆದರೂ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಹ್ಯ ತರಿಸುತ್ತದೆ. ದೇಶದಲ್ಲಿ ಅನ್ಯಾಯದ ಕಾನೂನುಗಳು ಜಾರಿಯಾಗುತ್ತಿವೆ. ಅನ್ಯಾಯದ ಕಾನೂನುಗಳನ್ನು ಜನರ ಮೇಲೆ ಹೇರಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದನ್ನು ಆಯ್ಕೆ ಮಾಡಿಕೊಳ್ಳದೆ ಜನರು ಏನು ಮಾಡಬೆಕು ಎಂದು ಪ್ರಶ್ನಿಸಿದ್ದಾರೆ.
ಸಂಸತ್ತಿನಲ್ಲಿ ಅಂಗೀಕರಿಸುವ ಕಾನೂನುಗಳನ್ನು ಜನರು ಪಾಲನೆ ಮಾಡಬೇಕು ಜನಪ್ರತಿನಿಧಿಗಳು ಪಾಲಿಸಬೇಕು ಎಂದು ಪ್ರಧಾನಿಗಳು ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇತಿಹಾಸವನ್ನು ಮರೆತಂತೆ ಕಾಣುತ್ತಿದೆ. ಮಹಾತ್ಮಗಾಂಧಿ, ಮಾರ್ಟಿನ್ ಲೂಥರ್ ಕಿಂಗ್ ಮತ್ತು ನೆಲ್ಸನ್ ಮಂಡೇಲ ಏನು ಮಾಡಿದರೆಂದು ತಿಳಿದುಕೊಳ್ಳಬೇಕು. ಜನರು ಅನ್ಯಾಯದ ಕಾನೂನುಗಳನ್ನು ವಿರೋಧಿಸಬೇಕು. ನಾಗರಿಕ ಅಸಹಕಾರ ತೋರಬೇಕು. ಇದು ಸತ್ಯಾಗ್ರಹ ಎಂದು ಮೋದಿ ಅವರನ್ನು ಮೂದಲಿಸಿದ್ದಾರೆ.



ಜನನಾಯಕರನ್ನು ಸುದೀರ್ಘ ಕಾಲ ಜೈಲಿನಲ್ಲಿ ಇಡುವುದು ಹೇಡಿತನವೇ ಹೊರತು ಧೀರತನವಲ್ಲ.
We see lot of leaders went on criticising running government since their ambition to be in power lost Reasons are either their way minting money from public budget and way for corruption is gone. They must understand that whatever you say will go in front of other countries and our position unwantedly goes down. This is due freedom for speech. So letting corrupt people in jail and keeping over talking people some time required. It is not as worst as the period in 1977 emergency. So atleast now onwards these do called leaders controll your tongue do that wrong message stop going to other countries.Go for discussion with Government as it is the correct way of democracy