Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...