Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...