Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...